basavadi sharanara vaibhava rathayatre
ಮಂಡ್ಯ : ಬಸವ ಜಯಂತಿ ಅಂಗವಾಗಿ ರಾಜ್ಯಾದ್ಯಂತ 15 ಜಿಲ್ಲೆಗಳಲ್ಲಿ ಏಪ್ರಿಲ್ 17 ರಿಂದ 29 ರವರೆಗೆ ಸಂಚರಿಸುತ್ತಿರುವ “ಅನುಭವ ಮಂಟಪ – ಬಸವಾದಿ ಶರಣರ ವೈಭವ” ರಥಯಾತ್ರೆ ಶುಕ್ರವಾರ ಜಿಲ್ಲೆಗೆ ಆಗಮಿಸಿದೆ.
ಜಿಲ್ಲಾಧಿಕಾರಿ ಡಾ.ಕುಮಾರ ರಥಯಾತ್ರೆಯನ್ನು ಬರಮಾಡಿಕೊಂಡ ಜಿಲ್ಲೆಯ ಸಂಚಾರದ ಯಾತ್ರೆಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಬಸವಣ್ಣನವರು ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ ವಿಶ್ವಕ್ಕೆ ಮಾದರಿ. ಅವರು ಇಡೀ ಜಗತ್ತಿಗೆ ವಿಶ್ವ ಗುರು ಆದವರು. ಅವರ ತತ್ವ ಹಾಗೂ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಚಿಂತಕರಾಗಿ, ವಚನಕಾರರಾಗಿ 12 ನೇ ಶತಮಾನದಿಂದ ಇಲ್ಲಿಯವರೆಗೂ ಅವರು ಸಮಾಜಕ್ಕೆ ನೀಡಿರುವ ಬೋಧನೆಗಳು, ಚಿಂತನೆಗಳು, ಮೌಲ್ಯಗಳು ಹಾಗೂ ಆದರ್ಶಗಳು ನಿಜಕ್ಕೂ ಅಪಾರ ಅವರ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕು ಎಂದರು.
ಸಾಮಾಜಿಕ ಸುಧಾರಣೆ ಮತ್ತು ಧಾರ್ಮಿಕ ಸುಧಾರಣೆಯಲ್ಲಿ ಮಹತ್ತರ ಬದಲಾವಣೆಯ ಆಶಯವನ್ನು ಕಂಡಂತಹ ಮಹಾನ್ ಮಾನವತವಾದಿ ಬಸವಣ್ಣರವರು. ಇಂದು ಅವರ ಜಯಂತಿ ಅಂಗವಾಗಿ ಸರ್ಕಾರ ಕೈಗೊಂಡಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥಯಾತ್ರೆಗೆ ಚಾಲನೆ ನೀಡಿದ್ದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಇಂತಹ ಮಹಾನ್ ಚಿಂತಕರ ಆದರ್ಶಗಳನ್ನು ನಾಡಿನಾದ್ಯಂತ ಪಸರಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ಸರ್ಕಾರವು ಏಪ್ರಿಲ್ 29 ಹಾಗೂ 30 ರಂದು ಅನುಭವ ಮಂಟಪ ಬಸವಾದಿ ಶರಣರ ವೈಭವ ಎಂಬ ಪರಿಕಲ್ಪನೆಯಲ್ಲಿ ಎರಡು ದಿನದ ಕಾರ್ಯಕ್ರಮವನ್ನು ಸಹ ಕೂಡಲಸಂಗಮದಲ್ಲಿ ಆಯೋಜಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ರೆಡ್ ಕ್ರಾಸ್ ಸಭಾಧ್ಯಕ್ಷ ಡಾ. ಮೀರಾ ಶಿವಲಿಂಗಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್, ಸಮುದಾಯ ಮುಖಂಡರುಗಳಾದ ಎಲ್.ಸಂದೇಶ್, ರಂಗಸ್ವಾಮಿ, ಎಂ. ವಿ ಧರಣೇಂದ್ರಯ್ಯ, ಮಂಜುನಾಥ ಬೆಟ್ಟಹಳ್ಳಿ, ರುದ್ರಸ್ವಾಮಿ, ಕೆಂಪಯ್ಯ ಸೇರಿದಂತೆ ಇನ್ನಿತರರಿದ್ದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…