ಮಂಡ್ಯ

ಅಂಚೆ ಮತ ಎಣಿಕೆಯನ್ನು ಜಾಗರೂಕತೆಯಿಂದ ನಡೆಸಿ : ಡಾ. ಕುಮಾರ

ಮಂಡ್ಯ:  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಇವಿಎಂ ಮತ ಎಣಿಕೆ ಬಳಿಕ ಅಂಚೆ ಮತಪತ್ರಗಳ ಎಣಿಕೆಯು ಸಹ ಬಹಳ ಜಾಗರೂಕತೆಯಿಂದ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಂಚೆ ಮತ ಎಣಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು.

ಇಂದು(ಮೇ.27) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಅಂಚೆ ಮತ ಎಣಿಕೆ ಅಧಿಕಾರಿ/ ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಚುನಾವಣಾ ತರಬೇತಿಯಲ್ಲಿ ಮಾತನಾಡಿದ ಅವರು, ಅಂಚೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಒಟ್ಟು 11 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್ ಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಂಚೆ ಮತ ಪತ್ರ ಎಣಿಕೆಯ ಸಹಾಯಕ ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಂಚೆ ಮತ ಎಣಿಕೆಯು ಬಹಳ ಸೂಕ್ಷ್ಮವಾಗಿದ್ದು, ಎಲ್ಲಾ ಮತ ಎಣಿಕೆ ಅಧಿಕಾರಿಗಳು, ಮೇಲ್ವಿಚಾರಕರುಗಳು ಹಾಗೂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಮತ ಎಣಿಕೆಯ  ಅಧಿಕಾರಿ ಹಾಗೂ ಸಿಬ್ಬಂದಿಗಳು ತರಬೇತಿಯಲ್ಲಿ ಸರಿಯಾದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆಯಿರಿ. ಮತ ಎಣಿಕೆಯ ದಿನದಂದು ಕೌಂಟಿಂಗ್ ಟೇಬಲ್ ನ ಸಂಖ್ಯೆ, ಅಧಿಕಾರಿ ಹೆಸರು, ಎಣಿಕೆ ಮೇಲ್ವಿಚಾರಕರ ಹೆಸರು,  ಪೋಸ್ಟಲ್ ಬ್ಯಾಲೆಟ್ ಬಂಡಲ್ ನ ಒಟ್ಟು ಸಂಖ್ಯೆಯನ್ನು ನೀಡಲಾಗುವ ನಮೂನೆಯಲ್ಲಿ ತಪ್ಪದೇ ನಮೂದಿಸಬೇಕು ಎಂದು ತಿಳಿಸಿದರು.

ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಮತ ಎಣಿಕೆಯನ್ನು ನಿಖರವಾಗಿ ನಮೂದಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

7 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

7 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

7 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

7 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

8 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

8 hours ago