ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಇವಿಎಂ ಮತ ಎಣಿಕೆ ಬಳಿಕ ಅಂಚೆ ಮತಪತ್ರಗಳ ಎಣಿಕೆಯು ಸಹ ಬಹಳ ಜಾಗರೂಕತೆಯಿಂದ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಂಚೆ ಮತ ಎಣಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು.
ಇಂದು(ಮೇ.27) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಅಂಚೆ ಮತ ಎಣಿಕೆ ಅಧಿಕಾರಿ/ ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಚುನಾವಣಾ ತರಬೇತಿಯಲ್ಲಿ ಮಾತನಾಡಿದ ಅವರು, ಅಂಚೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಒಟ್ಟು 11 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್ ಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಂಚೆ ಮತ ಪತ್ರ ಎಣಿಕೆಯ ಸಹಾಯಕ ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಂಚೆ ಮತ ಎಣಿಕೆಯು ಬಹಳ ಸೂಕ್ಷ್ಮವಾಗಿದ್ದು, ಎಲ್ಲಾ ಮತ ಎಣಿಕೆ ಅಧಿಕಾರಿಗಳು, ಮೇಲ್ವಿಚಾರಕರುಗಳು ಹಾಗೂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಮತ ಎಣಿಕೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತರಬೇತಿಯಲ್ಲಿ ಸರಿಯಾದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆಯಿರಿ. ಮತ ಎಣಿಕೆಯ ದಿನದಂದು ಕೌಂಟಿಂಗ್ ಟೇಬಲ್ ನ ಸಂಖ್ಯೆ, ಅಧಿಕಾರಿ ಹೆಸರು, ಎಣಿಕೆ ಮೇಲ್ವಿಚಾರಕರ ಹೆಸರು, ಪೋಸ್ಟಲ್ ಬ್ಯಾಲೆಟ್ ಬಂಡಲ್ ನ ಒಟ್ಟು ಸಂಖ್ಯೆಯನ್ನು ನೀಡಲಾಗುವ ನಮೂನೆಯಲ್ಲಿ ತಪ್ಪದೇ ನಮೂದಿಸಬೇಕು ಎಂದು ತಿಳಿಸಿದರು.
ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಮತ ಎಣಿಕೆಯನ್ನು ನಿಖರವಾಗಿ ನಮೂದಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…