ಮದ್ದೂರು : ತಾಲೂಕಿನ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಮನೆ ಯೊಂದರ ಬಳಿ ಕರಡಿ ಕಾಣಿಸಿಕೊಂಡಿದ್ದು,ಮನೆಯವರು ಕರಡಿಯನ್ನು ನೋಡಿಲ್ಲವಾದರೂ ಸಿಸಿ ಕ್ಯಾಮರಾದಲ್ಲಿ ಕರಡಿ ಅಡ್ಡಾಡುತ್ತಿರುವ ದೃಶ್ಯ ಸೆರೆಯಾಗಿದೆ.
ಮನೆಯ ಆವರಣ ಗೋಡೆಯ ಹೊರ ಭಾಗದಲ್ಲಿ ಕರಡಿ ಹಾದು ಹೋಗಿದ್ದು, ಬಯಲು ಪ್ರದೇಶದಲ್ಲಿ ಕಣ್ಮರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿ ನೋಡುತ್ತಿದ್ದಾಗ ಕರಡಿ ಪ್ರತ್ಯಕ್ಷವಾಗಿರುವುದು ಮನೆಯವರಿಗೆ ಗೊತ್ತಾಗಿದ್ದು. ಕರಡಿ ಅಡ್ಡಾಡುತ್ತಿರುವ ಬಗ್ಗೆ ಗ್ರಾಮದ ಜನತೆಗೆ ವಿಚಾರ ಮುಟ್ಟಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಾಲೂಕಿನ ವಿವಿದೆಡೆ ಚಿರತೆ ಹಾವಳಿ ಹೆಚ್ಚಾದ ಹಿನ್ನಲೆ. ಹೊಲಗದ್ದೆಗಳಿಗೆ ಹೋಗುವ ರೈತರು ಆತಂಕ ಕೀಡಾಗಿದ್ದರು, ಇದೀಗ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಕಾಡು ಪ್ರಾಣಿಗಳು ಗ್ರಾಮಗಳಲ್ಲಿ ಪ್ರತ್ಯಕ್ಷ ಗೊಳ್ಳುತ್ತಿರುವ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಕರಡಿ ಮತ್ತು ಚಿರತೆ ಸೆರೆಗೆ ಮುಂದಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮದ ಜನತೆ ಒತ್ತಾಯಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…