ಮಂಡ್ಯ

Accident: ಅಪರಿಚಿತ ವಾಹನ ಡಿಕ್ಕಿ ಮಹಿಳೆ ಸಾವು; ಹೆದ್ದಾರಿಯಲ್ಲಿ ಸ್ಥಳೀಯರಿಂದ ಪ್ರತಿಭಟನೆ

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ ಪತ್ನಿ ಯಶೋದಮ್ಮ (೫೫) ಮೃತ ಮಹಿಳೆ. ಯಶೋದಮ್ಮ ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಹಿಳೆಯರ ದೇಹ ಸಂಪೂರ್ಣ ಛಿದ್ರಗೊಂಡಿದೆ. ಘಟನೆಗೆ ಕಾರಣವಾದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಇದು ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆ ಹಿನ್ನಲೆಯಲ್ಲಿ ಸ್ಥಳೀಯರು ಹೆದ್ದಾರಿಯ ಎರಡೂ ಮಾರ್ಗಗಳಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಅಗತ್ಯ ಸ್ಥಳದಲ್ಲಿ ಅಂಡರ್‌ಪಾಸ್ ನಿರ್ಮಿಸಿಲ್ಲ. ಇದರಿಂದ ಸ್ಥಳೀಯರು ಹೆದ್ದಾರಿ ದಾಟಲು ತೊಂದರೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷದಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಕಿಡಿಕಾರಿದರು.

ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತಮ್ಮ ಸಿಟ್ಟು ಹೊರಹಾಕಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಡಿಸಿ, ಎಸ್ಪಿ ಆಗಮಿಸಿದ ಹೊರತು ಶವವನ್ನು ತೆಗೆಯಲು ಬಿಡದೆ ಕಿಡಿಕಾರಿದರು. ಇದರಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಮನವೊಲಿಸಿದರು. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

4 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

4 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

5 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

5 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

5 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

5 hours ago