bengaluru mysore highway accident
ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ ಪತ್ನಿ ಯಶೋದಮ್ಮ (೫೫) ಮೃತ ಮಹಿಳೆ. ಯಶೋದಮ್ಮ ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಹಿಳೆಯರ ದೇಹ ಸಂಪೂರ್ಣ ಛಿದ್ರಗೊಂಡಿದೆ. ಘಟನೆಗೆ ಕಾರಣವಾದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಇದು ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆ ಹಿನ್ನಲೆಯಲ್ಲಿ ಸ್ಥಳೀಯರು ಹೆದ್ದಾರಿಯ ಎರಡೂ ಮಾರ್ಗಗಳಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಅಗತ್ಯ ಸ್ಥಳದಲ್ಲಿ ಅಂಡರ್ಪಾಸ್ ನಿರ್ಮಿಸಿಲ್ಲ. ಇದರಿಂದ ಸ್ಥಳೀಯರು ಹೆದ್ದಾರಿ ದಾಟಲು ತೊಂದರೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷದಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಕಿಡಿಕಾರಿದರು.
ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತಮ್ಮ ಸಿಟ್ಟು ಹೊರಹಾಕಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಡಿಸಿ, ಎಸ್ಪಿ ಆಗಮಿಸಿದ ಹೊರತು ಶವವನ್ನು ತೆಗೆಯಲು ಬಿಡದೆ ಕಿಡಿಕಾರಿದರು. ಇದರಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಮನವೊಲಿಸಿದರು. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…