ಬೆಂಗಳೂರು: ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜು ಫೆಸ್ಟ್ ನಡೆಯುವಾಗ ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವ ಸೆಕ್ಯೂರಿಟಿ ಗಾರ್ಡ್ ನನ್ನೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧುವಾರ(ಜು.3) ನಡೆದಿದೆ.
ಕಾಲೇಜು ಸೆಕ್ಯೂರಿಟಿ ಜೈಕಿಶೋರ್ ರಾಯ್ ಕೊಲೆಯಾದ ವ್ಯಕ್ತಿ. ವಿದ್ಯಾರ್ಥಿ ಭಾರ್ಗವ್ ಕೊಲೆ ಆರೋಪಿಯಾಗಿದ್ದಾನೆ. ಸದ್ಯ ಹತ್ಯೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬುಧುವಾರ ಸಿಂಧಿ ಕಾಲೇಜಿನಲ್ಲಿ ಕಾಲೇಜುಡೇ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಶುರುವಾಗಿ ಮುಗಿಯುವವರೆಗೂ ವಿದ್ಯಾರ್ಥಿಗಳು ಪದೇ ಪದೇ ಓಡಾಡದಂತೆ ಸೂಚಿಸಲಾಗಿತ್ತು. ಆದರೆ ಕೊಲೆ ಆರೋಪಿ ಭಾರ್ಗವ್ ಪದೇ ಪದೇ ಓಡಾಡುತ್ತಿದ್ದ. ಹೀಗಾಗಿ ಸೆಕ್ಯೂರಿಟಿ ಇದನ್ನ ಪ್ರಶ್ನಿಸಿ ವಾರ್ನ್ ಮಾಡಿದ್ದರು. ಯುವತಿಯರ ಮುಂದೆ ಪ್ರಶ್ನಿಸಿದ್ದಕ್ಕೆ ಕೋಪಗೊಂಡಿದ್ದ ಆರೋಪಿ ಭಾರ್ಗವ್ ಗಲಾಟೆಯಾದ ನಂತರ ಪಿಜೆಗೆ ತೆರಳಿ ಚಾಕು ತಂದಿದ್ದ. ಕೇವಲ 15 ಸೆಕೆಂಡ್ನಲ್ಲಿ ಐದಾರು ಬಾರಿ ಸೆಕ್ಯೂರಿಟಿ ಗಾರ್ಡ್ ಜೈಕಿಶೋರ್ರಾಯ್ ಎದೆಗೆ ಮನಸೋ ಇಚ್ಚೆ ಇರಿದು ಕೊಲೆ ಮಾಡಿದ್ದಾನೆ.
ಸದ್ಯ ಅಮೃತಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…