ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಐಎಎಸ್ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗವು ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಪ್ರಶಸ್ತಿಯನ್ನು ಜನವರಿ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುತ್ತದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.