ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಇಂದು ಈ ನಾಡಿನ ಮಹಾ ಪುರುಷರಾದ ಭಗೀರಥ ಮಹರ್ಷಿಯ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ. ಗಂಗೆಯನ್ನು ತನ್ನ ತಪಸ್ಸಿನ ಫಲವಾಗಿ ಭೂ ಲೋಕಕ್ಕೆ ಕರೆ ತಂದಂತಹ ಮಹಾನ್ ಪುರುಷ ಭಗೀರಥ ಮಹರ್ಷಿ ಎಂಬ ಐತಿಹಾಸಿಕ ಹಿನ್ನೆಲೆಯಿದೆ. ಅಂದಿನ ಸಮಾಜಕ್ಕೆ ಸಾಕಷ್ಟು ಕೊಡುಗೆಯನ್ನು ಅವರು ನೀಡಿದ್ದು, ಭಗೀರಥರ ನಿಷ್ಠೆ, ದೃಢವಿಶ್ವಾಸ, ಛಲ ಹಾಗೂ ಸತತ ಪ್ರಯತ್ನದ ಗುಣವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಎಲ್ಲರ ಜೀವನದಲ್ಲಿ ಪ್ರಯತ್ನ ಎಂಬುದು ನಿರಂತರವಾಗಿರಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು ಅವರು ಮಾತನಾಡಿ ಭಗೀರಥ ಮಹರ್ಷಿಯು ಒಳ್ಳೆಯ ತಪಸ್ಸು ಹಾಗೂ ತಮ್ಮ ಸತತ ಪ್ರಯತ್ನಗಳ ಮೂಲಕ ಗಂಗೆಯನ್ನು ಭೂಲೋಕಕ್ಕೆ ತಂದು, ಇಡೀ ಭರತ ಖಂಡವನ್ನು ಪವಿತ್ರ ಭೂಮಿಯನ್ನಾಗಿ ಮಾಡಿದ್ದಾರೆ. ಈ ಮೂಲಕ ಅಂದಿನ ಕೃಷಿಕ ಸಮಾಜದ ಉದ್ಧಾರಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಪ್ರಸಿದ್ಧ ಪುರಾಣಗಳಿಂದ ತಿಳಿಯಬಹುದು. ಪ್ರಸ್ತುತ ಗಂಗಾ ನದಿಯು ಜಗತ್ತಿನ ಶ್ರೇಷ್ಠ ನದಿಯಾಗಿದೆ ಎಂದರು.
ಪ್ರತಿಯೊಬ್ಬರೂ ಭಗೀರಥ ಮಹರ್ಷಿಯ ಜಯಂತಿ ದಿನವಾದ ಇಂದು ಅವರ ಸ್ಮರಣೆಯನ್ನು ಮಾಡಿ ಭಕ್ತಿಯಿಂದ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…