nikhil kumaraswamy siddaramaiah
ಭಾರತೀನಗರ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರು ಹಿಂದೂ ವಿರೋಧಿಯಾಗಿದ್ದಾರೆ. ಹೀಗಾಗಿ ಅವರಿಂದ ದಸರಾ ಉದ್ಘಾಟನೆ ಸರಿಯಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಾಡಹಬ್ಬ ದಸರಾವನ್ನು ಹಿಂದಿನಿಂದಲೂ ಪ್ರಗತಿಪರ ಚಿಂತಕರು, ಲೇಖಕರು, ಸಮಾಜ ಸುಧಾರಕರಿಂದ ಉದ್ಘಾಟನೆ ಮಾಡಿಸುತ್ತಾ ಬರಲಾಗುತ್ತಿದೆ. ಈ ಬಾರಿಯೂ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಗಳಿಸಿರುವ ಭಾನು ಮುಷ್ತ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಭಾನು ಮುಸ್ತಾಕ್ ಅವರು ಈ ಹಿಂದೆ ಚಾಮುಂಡಿ ತಾಯಿ, ಅರಿಸಿಣ ಕುಂಕುಮ, ನಾಡಧ್ವಜದ ಬಗ್ಗೆ ಲಘುವಾಗಿ ಮಾತನಾಡಿರುವುದು ಗಮನಿಸಿದರೆ ಅವರು ಹಿಂದೂ ಸಮಾಜದ ಬಗ್ಗೆ ಇರುವ ವಿರೋಧಿತನವನ್ನು ತೋರಿಸುತ್ತದೆ ಎಂದು ಹೇಳಿದರು.
ಈ ಬಗ್ಗೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ಹಿಂದೂ ವಿರೋಧಿ ಮನಸ್ಥಿತಿಯಿರುವ ಇಂತಹವರನ್ನು ನಾಡಹಬ್ಬ ದಸರಾ ಉದ್ಘಾಟನೆಗೆ ಆಹ್ವಾನಿಸುವ ನಿರ್ಧಾರ ಕೈಬಿಟ್ಟು, ಇನ್ನೂ ಉತ್ತಮರನ್ನು ಆಯ್ಕೆ ಮಾಡಬೇಕೇಂದು ಒತ್ತಾಯಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…