nikhil kumaraswamy siddaramaiah
ಭಾರತೀನಗರ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರು ಹಿಂದೂ ವಿರೋಧಿಯಾಗಿದ್ದಾರೆ. ಹೀಗಾಗಿ ಅವರಿಂದ ದಸರಾ ಉದ್ಘಾಟನೆ ಸರಿಯಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಾಡಹಬ್ಬ ದಸರಾವನ್ನು ಹಿಂದಿನಿಂದಲೂ ಪ್ರಗತಿಪರ ಚಿಂತಕರು, ಲೇಖಕರು, ಸಮಾಜ ಸುಧಾರಕರಿಂದ ಉದ್ಘಾಟನೆ ಮಾಡಿಸುತ್ತಾ ಬರಲಾಗುತ್ತಿದೆ. ಈ ಬಾರಿಯೂ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಗಳಿಸಿರುವ ಭಾನು ಮುಷ್ತ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಭಾನು ಮುಸ್ತಾಕ್ ಅವರು ಈ ಹಿಂದೆ ಚಾಮುಂಡಿ ತಾಯಿ, ಅರಿಸಿಣ ಕುಂಕುಮ, ನಾಡಧ್ವಜದ ಬಗ್ಗೆ ಲಘುವಾಗಿ ಮಾತನಾಡಿರುವುದು ಗಮನಿಸಿದರೆ ಅವರು ಹಿಂದೂ ಸಮಾಜದ ಬಗ್ಗೆ ಇರುವ ವಿರೋಧಿತನವನ್ನು ತೋರಿಸುತ್ತದೆ ಎಂದು ಹೇಳಿದರು.
ಈ ಬಗ್ಗೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ಹಿಂದೂ ವಿರೋಧಿ ಮನಸ್ಥಿತಿಯಿರುವ ಇಂತಹವರನ್ನು ನಾಡಹಬ್ಬ ದಸರಾ ಉದ್ಘಾಟನೆಗೆ ಆಹ್ವಾನಿಸುವ ನಿರ್ಧಾರ ಕೈಬಿಟ್ಟು, ಇನ್ನೂ ಉತ್ತಮರನ್ನು ಆಯ್ಕೆ ಮಾಡಬೇಕೇಂದು ಒತ್ತಾಯಿಸಿದರು.
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…