ಮಂಡ್ಯ

ಭಾರತೀನಗರ | ಧರ್ಮಸ್ಥಳ ಸತ್ಯ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿಖಿಲ್‌ಕುಮಾರ್‌ಸ್ವಾಮಿ ಕರೆ

ಭಾರತೀನಗರ : ಸಮಾಜ ಘಾತಕರು, ದುಷ್ಟ ಶಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ತರಲು ಹೊರಟಿದೆ. ಅದನ್ನು ತೊಳೆಯಲು ಧರ್ಮಸ್ಥಳ ಸತ್ಯಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ದೊಡ್ಡರಸಿನಕೆರೆ ಸಮೀಪದ ಚಿಕ್ಕಮರೀಗೌಡನದೊಡ್ಡಿ ಗ್ರಾಮದಲ್ಲಿ ಆಯೋಜಿಸಲಾಗಿರುವ ದೊಡ್ಡರಸಿನಕೆರೆ ಮುಟ್ಟನಹಳ್ಳಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ (ಡಿಎಂಪಿಎಲ್) ಚಾಲನೆ ನೀಡಿ ಅವರು ಮಾತನಾಡಿದರು.

ಧರ್ಮಸ್ಥಳ ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತಾಧಿಗಳನ್ನು ಹೊಂದಿದೆ. ಇದಕ್ಕೆ ಅಪಮಾನ ಹೊಡ್ಡಲು ಮುಂದಾಗಿದ್ದಾರೆ. ಈ ಕಳಂಕವನ್ನು ಹೋಗಲಾಡಿಸಲು ನಮ್ಮ ಜಾ.ದಳ ಪಕ್ಷದ ಕಡೆಯಿಂದ ಕಾರ್ಯಕರ್ತರು, ಅಭಿಮಾನಿಗಳು ೨೫ ಸಾವಿರಕ್ಕೂ ಹೆಚ್ಚು ಮಂದಿ ಧರ್ಮಸ್ಥಳ ಸತ್ಯಯಾತ್ರೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ಚಿಕ್ಕವಯಸ್ಸಿನಿಂದಲೂ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿಯ ಸ್ಮರಣೆಯಲ್ಲಿಯೇ ಲಕ್ಷಾಂತರ ಜನ ಜೀವಿಸುತ್ತಿದ್ದು, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮುಂಜುನಾಥ ನೆಲೆಸಿರುವ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ್ದಾರೆ. ಇದನ್ನು ತೊಡೆದು ಹಾಕುವ ದೃಷ್ಟಿಯಿಂದ ಸತ್ಯಯಾತ್ರೆಯ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಎಲ್ಲಾ ಭಕ್ತರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಧರ್ಮಸ್ಥಳ ಸತ್ಯಯಾತ್ರೆಯಲ್ಲಿ ಯಾವುದೇ ರಾಜಕೀಯ ಬೆರಸುವಂತದ್ದಲ್ಲ, ಪಕ್ಷಾತೀತವಾಗಿ ಮಾಡುವಂತದ್ದಾಗಿದೆ. ೭೦೦, ೮೦೦ ವರ್ಷಗಳ ಇತಿಹಾಸ ಇರುವಂತಹ ಧರ್ಮಸ್ಥಳಕ್ಕೆ ಬಂದಿರುವ ಕಳಂಕವನ್ನು ತೊಳೆದು ಹಾಕುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಧರ್ಮಸ್ಥಳ ಸತ್ಯಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಬೇಕೆಂದು ಹೇಳಿದರು.

ಜಾ.ದಳ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮುಖಂಡರಾದ ರಾಜ್ಯ ಘಟಕದ ಕಾರ್ಯದರ್ಶಿ ಕೆಸ್ತೂರು ಬಿಳಿಯಪ್ಪ, ಮನ್ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರು, ಅಪ್ಪು ಪಿ.ಗೌಡ, ಗುರುದೇವರಹಳ್ಳಿ ಅರವಿಂದ್, ಕರಡಕೆರೆ ಹನುಮಂತೇಗೌಡ , ಡಿ.ಎ.ಕೆರೆ ಪ್ರದೀಪ್, ಚಿಕ್ಕಹುಚ್ಚೇಗೌಡ, ಸೊಸೈಟಿ ಅಧ್ಯಕ್ಷ ಮಹೇಶ್,ಕಾರ್ಯಕ್ರಮದ ಆಯೋಜಕರಾದ ನಂದನ್, ಹರ್ಷಿತ್‌ಗೌಡ, ಸುದರ್ಶನ, ಅಭಿಷೇಕ್, ನಿಶಾಂತ್, ಗೌತಮ್, ಬಸವರಾಜು, ಶಿವಲಿಂಗ, ಸಂದೀಪ್, ಕಿರಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago