Mysore
27
few clouds

Social Media

ಬುಧವಾರ, 11 ಫೆಬ್ರವರಿ 2026
Light
Dark

ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ನೌಕರರಿಗೆ ಬಿಗ್‌ ಶಾಕ್‌

ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳ ಹಿಂದೆ ಮಾಜಿ ಸಚಿವ ಮುರುಗೇಶ್‌ ನಿರಾಣಿಯವರ ನಿರಾಣಿ ಶುಗರ್ಸ್‌ ಕಂಪನಿಗೆ 40 ವರ್ಷಗಳ ಗುತ್ತಿಗೆ ನೀಡಲಾಗಿತ್ತು.

ಆ ವೇಳೆ ಒಂದಷ್ಟು ಷರತ್ತನ್ನು ಸಹ ವಿಧಿಸಲಾಗಿತ್ತು. ಅದರಲ್ಲಿ ಪ್ರಮುಖವಾಗಿ ಪಿಎಸ್‌ಎಸ್‌ಕೆ ಕಂಪನಿ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯಬಾರದೆಂದು ಒಪ್ಪಂದ ಹಾಕಿತ್ತು. ಆದರೆ ಈಗ ಸ್ಥಳೀಯ 45 ಮಂದಿ ಕಂಪನಿ ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ದಬ್ಬಾಳಿಕೆ ನಡೆಸಿದೆ. ಇದರಿಂದ ಕೆಲಸ ಕಳೆದುಕೊಂಡ ನೌಕರರು ತೀವ್ರ ಆತಂಕದಲ್ಲಿದ್ದಾರೆ.

ನೌಕರರು ಕೆಲಸ ಕಳೆದುಕೊಂಡ ಹಿನ್ನೆಲೆಯಲ್ಲಿ ನೌಕರರ ಕುಟುಂಬವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುರುಗೇಶ್‌ ನಿರಾಣಿ ಮಾಲೀಕತ್ವದ ಕಂಪನಿ ವಿರುದ್ಧ ಎಲ್ಲೆಡೆ ಆಕ್ರೋಶ ಕೇಳಿಬಂದಿದೆ.

 

Tags:
error: Content is protected !!