ಮಂಡ್ಯ

ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ನೌಕರರಿಗೆ ಬಿಗ್‌ ಶಾಕ್‌

ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳ ಹಿಂದೆ ಮಾಜಿ ಸಚಿವ ಮುರುಗೇಶ್‌ ನಿರಾಣಿಯವರ ನಿರಾಣಿ ಶುಗರ್ಸ್‌ ಕಂಪನಿಗೆ 40 ವರ್ಷಗಳ ಗುತ್ತಿಗೆ ನೀಡಲಾಗಿತ್ತು.

ಆ ವೇಳೆ ಒಂದಷ್ಟು ಷರತ್ತನ್ನು ಸಹ ವಿಧಿಸಲಾಗಿತ್ತು. ಅದರಲ್ಲಿ ಪ್ರಮುಖವಾಗಿ ಪಿಎಸ್‌ಎಸ್‌ಕೆ ಕಂಪನಿ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯಬಾರದೆಂದು ಒಪ್ಪಂದ ಹಾಕಿತ್ತು. ಆದರೆ ಈಗ ಸ್ಥಳೀಯ 45 ಮಂದಿ ಕಂಪನಿ ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ದಬ್ಬಾಳಿಕೆ ನಡೆಸಿದೆ. ಇದರಿಂದ ಕೆಲಸ ಕಳೆದುಕೊಂಡ ನೌಕರರು ತೀವ್ರ ಆತಂಕದಲ್ಲಿದ್ದಾರೆ.

ನೌಕರರು ಕೆಲಸ ಕಳೆದುಕೊಂಡ ಹಿನ್ನೆಲೆಯಲ್ಲಿ ನೌಕರರ ಕುಟುಂಬವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುರುಗೇಶ್‌ ನಿರಾಣಿ ಮಾಲೀಕತ್ವದ ಕಂಪನಿ ವಿರುದ್ಧ ಎಲ್ಲೆಡೆ ಆಕ್ರೋಶ ಕೇಳಿಬಂದಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

4 hours ago

ಬಾಲ್ಯವನ್ನು ನೆನಪಿಸಿದ ಗುರು-ಶಿಷ್ಯರ ಸ್ನೇಹ ಸಮ್ಮಿಲನ

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…

4 hours ago

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

4 hours ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

4 hours ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

14 hours ago