ಮಂಡ್ಯ: ಪಿಎಸ್ಎಸ್ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳ ಹಿಂದೆ ಮಾಜಿ ಸಚಿವ ಮುರುಗೇಶ್ ನಿರಾಣಿಯವರ ನಿರಾಣಿ ಶುಗರ್ಸ್ ಕಂಪನಿಗೆ 40 ವರ್ಷಗಳ ಗುತ್ತಿಗೆ ನೀಡಲಾಗಿತ್ತು.
ಆ ವೇಳೆ ಒಂದಷ್ಟು ಷರತ್ತನ್ನು ಸಹ ವಿಧಿಸಲಾಗಿತ್ತು. ಅದರಲ್ಲಿ ಪ್ರಮುಖವಾಗಿ ಪಿಎಸ್ಎಸ್ಕೆ ಕಂಪನಿ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯಬಾರದೆಂದು ಒಪ್ಪಂದ ಹಾಕಿತ್ತು. ಆದರೆ ಈಗ ಸ್ಥಳೀಯ 45 ಮಂದಿ ಕಂಪನಿ ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ದಬ್ಬಾಳಿಕೆ ನಡೆಸಿದೆ. ಇದರಿಂದ ಕೆಲಸ ಕಳೆದುಕೊಂಡ ನೌಕರರು ತೀವ್ರ ಆತಂಕದಲ್ಲಿದ್ದಾರೆ.
ನೌಕರರು ಕೆಲಸ ಕಳೆದುಕೊಂಡ ಹಿನ್ನೆಲೆಯಲ್ಲಿ ನೌಕರರ ಕುಟುಂಬವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುರುಗೇಶ್ ನಿರಾಣಿ ಮಾಲೀಕತ್ವದ ಕಂಪನಿ ವಿರುದ್ಧ ಎಲ್ಲೆಡೆ ಆಕ್ರೋಶ ಕೇಳಿಬಂದಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…