ಮಂಡ್ಯ: ಪಿಎಸ್ಎಸ್ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳ ಹಿಂದೆ ಮಾಜಿ ಸಚಿವ ಮುರುಗೇಶ್ ನಿರಾಣಿಯವರ ನಿರಾಣಿ ಶುಗರ್ಸ್ ಕಂಪನಿಗೆ 40 ವರ್ಷಗಳ ಗುತ್ತಿಗೆ ನೀಡಲಾಗಿತ್ತು.
ಆ ವೇಳೆ ಒಂದಷ್ಟು ಷರತ್ತನ್ನು ಸಹ ವಿಧಿಸಲಾಗಿತ್ತು. ಅದರಲ್ಲಿ ಪ್ರಮುಖವಾಗಿ ಪಿಎಸ್ಎಸ್ಕೆ ಕಂಪನಿ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯಬಾರದೆಂದು ಒಪ್ಪಂದ ಹಾಕಿತ್ತು. ಆದರೆ ಈಗ ಸ್ಥಳೀಯ 45 ಮಂದಿ ಕಂಪನಿ ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ದಬ್ಬಾಳಿಕೆ ನಡೆಸಿದೆ. ಇದರಿಂದ ಕೆಲಸ ಕಳೆದುಕೊಂಡ ನೌಕರರು ತೀವ್ರ ಆತಂಕದಲ್ಲಿದ್ದಾರೆ.
ನೌಕರರು ಕೆಲಸ ಕಳೆದುಕೊಂಡ ಹಿನ್ನೆಲೆಯಲ್ಲಿ ನೌಕರರ ಕುಟುಂಬವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುರುಗೇಶ್ ನಿರಾಣಿ ಮಾಲೀಕತ್ವದ ಕಂಪನಿ ವಿರುದ್ಧ ಎಲ್ಲೆಡೆ ಆಕ್ರೋಶ ಕೇಳಿಬಂದಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…