ಮಂಡ್ಯ: ಬಿಹಾರದಲ್ಲಿನ ಬೌದ್ಧಗಯಾ ಕೇಂದ್ರದ ಸಂಪೂರ್ಣ ಆಡಳಿತವನ್ನು ಮೂಲ ಬುದ್ಧ ಅನುಯಾಯಿಗಳಿಗೆ ಬಿಡಿಸಿಕೊಡುಬೇಕು ಎಂದು ಬೆಂಗಳೂರಿನ ಸ್ಪೂರ್ತಿಧಾಮದ ಧಮ್ಮವೀರ ಬಂತೇಜಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದ ಬೌದ್ಧಗಯಾ ಕೇಂದ್ರವು ಹಿಂದಿನಿಂದ ಬುದ್ಧರ ಅನುಯಾಗಿಗಳಾಗಿ ಬೌದ್ಧರ ಸಿದ್ದಾಂತಗಳನ್ನು ಪಾಲಿಸುವವರಿಗೆ ನೀಡಬೇಕು ಎಂದರು.
ಈ ನಿಟ್ಟಿನಲ್ಲಿ ಸದರಿ ಕೇಂದ್ರವನ್ನು ಬೌದ್ಧರಿಗೆ ವಹಿಸಬೇಕು ಎಂಬ ಜಾಗೃತಿಯನ್ನು ರಾಷ್ಟ್ರಾದ್ಯಂತ ಮೂಡಿಸಲಾಗುತ್ತಿದೆ. ಕೂಡಲೇ ಸಂಬಂಧಿತರು ಕೂಡಲೇ ಬೌದ್ಧ ಧಮ್ಮ ಅನುಯಾಗಿಗಳಿಗೆ ಬೌದ್ಧ ಗಯಾದ ಸಂಪೂರ್ಣ ಆಡಳಿತ ವ್ಯವಸ್ಥೆಯನ್ನು ವಹಿಸಿಕೊಟ್ಟು. ಈ ವಿಷಯವಾಗಿ ನಡೆಯುತ್ತಿರುವ ಸಂಘರ್ಷಗಳಿಗೆ ಪೂರ್ಣ ವಿರಾಮ ಹಾಕಲು ಮುಂದಾಗಬೇಕು ಎಂದು ಕೋರಿದರು.
ಬೌದ್ಧ ಧಮ್ಮ ಸ್ವೀಕರಿಸಿ ಬುದ್ದರ ಅನುಯಾಯಿಗಳಾದವರು ಎಸ್ಸಿ, ಎಸ್ಟಿ ಕಾಯ್ದೆಯಡಿ ಸರ್ಕಾರದಿಂದ ನೀಡಲಾಗುವ ಸವಲತ್ತುಗಳನ್ನು ಸ್ವೀಕರಿಸುವುದು ಅಕ್ಷಮ್ಯ ಅಪರಾಧ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್ನ ಅಧ್ಯಕ್ಷ ಹೆಚ್.ಜಿ.ಗಂಗರಾಜು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಗೋಷ್ಠಿಯಲ್ಲಿ ಬುದ್ಧ ಭಾರತ ಫೌಂಡೇಷನ್ನ ಅಧ್ಯಕ್ಷ ಜೆ.ರಾಮಯ್ಯ, ಅಮ್ಜದ್ ಪಾಷ, ಡಾ.ಶ್ರೀನಿವಾಸ್, ಸಿದ್ದರಾಮು ಇದ್ದರು.
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…