ಮಂಡ್ಯ: ಬಿಹಾರದಲ್ಲಿನ ಬೌದ್ಧಗಯಾ ಕೇಂದ್ರದ ಸಂಪೂರ್ಣ ಆಡಳಿತವನ್ನು ಮೂಲ ಬುದ್ಧ ಅನುಯಾಯಿಗಳಿಗೆ ಬಿಡಿಸಿಕೊಡುಬೇಕು ಎಂದು ಬೆಂಗಳೂರಿನ ಸ್ಪೂರ್ತಿಧಾಮದ ಧಮ್ಮವೀರ ಬಂತೇಜಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದ ಬೌದ್ಧಗಯಾ ಕೇಂದ್ರವು ಹಿಂದಿನಿಂದ ಬುದ್ಧರ ಅನುಯಾಗಿಗಳಾಗಿ ಬೌದ್ಧರ ಸಿದ್ದಾಂತಗಳನ್ನು ಪಾಲಿಸುವವರಿಗೆ ನೀಡಬೇಕು ಎಂದರು.
ಈ ನಿಟ್ಟಿನಲ್ಲಿ ಸದರಿ ಕೇಂದ್ರವನ್ನು ಬೌದ್ಧರಿಗೆ ವಹಿಸಬೇಕು ಎಂಬ ಜಾಗೃತಿಯನ್ನು ರಾಷ್ಟ್ರಾದ್ಯಂತ ಮೂಡಿಸಲಾಗುತ್ತಿದೆ. ಕೂಡಲೇ ಸಂಬಂಧಿತರು ಕೂಡಲೇ ಬೌದ್ಧ ಧಮ್ಮ ಅನುಯಾಗಿಗಳಿಗೆ ಬೌದ್ಧ ಗಯಾದ ಸಂಪೂರ್ಣ ಆಡಳಿತ ವ್ಯವಸ್ಥೆಯನ್ನು ವಹಿಸಿಕೊಟ್ಟು. ಈ ವಿಷಯವಾಗಿ ನಡೆಯುತ್ತಿರುವ ಸಂಘರ್ಷಗಳಿಗೆ ಪೂರ್ಣ ವಿರಾಮ ಹಾಕಲು ಮುಂದಾಗಬೇಕು ಎಂದು ಕೋರಿದರು.
ಬೌದ್ಧ ಧಮ್ಮ ಸ್ವೀಕರಿಸಿ ಬುದ್ದರ ಅನುಯಾಯಿಗಳಾದವರು ಎಸ್ಸಿ, ಎಸ್ಟಿ ಕಾಯ್ದೆಯಡಿ ಸರ್ಕಾರದಿಂದ ನೀಡಲಾಗುವ ಸವಲತ್ತುಗಳನ್ನು ಸ್ವೀಕರಿಸುವುದು ಅಕ್ಷಮ್ಯ ಅಪರಾಧ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್ನ ಅಧ್ಯಕ್ಷ ಹೆಚ್.ಜಿ.ಗಂಗರಾಜು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಗೋಷ್ಠಿಯಲ್ಲಿ ಬುದ್ಧ ಭಾರತ ಫೌಂಡೇಷನ್ನ ಅಧ್ಯಕ್ಷ ಜೆ.ರಾಮಯ್ಯ, ಅಮ್ಜದ್ ಪಾಷ, ಡಾ.ಶ್ರೀನಿವಾಸ್, ಸಿದ್ದರಾಮು ಇದ್ದರು.
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…