ಮಂಡ್ಯ

ಬಿಹಾರ ಬೌದ್ದಗಯಾ ; ಬೌದ್ದ ಅನುಯಾಯಿಗಳಿಗೆ ಆಡಳಿತ ನೀಡಲು ಬಂತೇಜಿ ಒತ್ತಾಯ

ಮಂಡ್ಯ: ಬಿಹಾರದಲ್ಲಿನ ಬೌದ್ಧಗಯಾ ಕೇಂದ್ರದ ಸಂಪೂರ್ಣ ಆಡಳಿತವನ್ನು ಮೂಲ ಬುದ್ಧ ಅನುಯಾಯಿಗಳಿಗೆ ಬಿಡಿಸಿಕೊಡುಬೇಕು ಎಂದು ಬೆಂಗಳೂರಿನ ಸ್ಪೂರ್ತಿಧಾಮದ ಧಮ್ಮವೀರ ಬಂತೇಜಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದ ಬೌದ್ಧಗಯಾ ಕೇಂದ್ರವು ಹಿಂದಿನಿಂದ ಬುದ್ಧರ ಅನುಯಾಗಿಗಳಾಗಿ ಬೌದ್ಧರ ಸಿದ್ದಾಂತಗಳನ್ನು ಪಾಲಿಸುವವರಿಗೆ ನೀಡಬೇಕು ಎಂದರು.

ಈ ನಿಟ್ಟಿನಲ್ಲಿ ಸದರಿ ಕೇಂದ್ರವನ್ನು ಬೌದ್ಧರಿಗೆ ವಹಿಸಬೇಕು ಎಂಬ ಜಾಗೃತಿಯನ್ನು ರಾಷ್ಟ್ರಾದ್ಯಂತ ಮೂಡಿಸಲಾಗುತ್ತಿದೆ. ಕೂಡಲೇ ಸಂಬಂಧಿತರು ಕೂಡಲೇ ಬೌದ್ಧ ಧಮ್ಮ ಅನುಯಾಗಿಗಳಿಗೆ ಬೌದ್ಧ ಗಯಾದ ಸಂಪೂರ್ಣ ಆಡಳಿತ ವ್ಯವಸ್ಥೆಯನ್ನು ವಹಿಸಿಕೊಟ್ಟು. ಈ ವಿಷಯವಾಗಿ ನಡೆಯುತ್ತಿರುವ ಸಂಘರ್ಷಗಳಿಗೆ ಪೂರ್ಣ ವಿರಾಮ ಹಾಕಲು ಮುಂದಾಗಬೇಕು ಎಂದು ಕೋರಿದರು.

ಬೌದ್ಧ ಧಮ್ಮ ಸ್ವೀಕರಿಸಿ ಬುದ್ದರ ಅನುಯಾಯಿಗಳಾದವರು ಎಸ್ಸಿ, ಎಸ್ಟಿ ಕಾಯ್ದೆಯಡಿ ಸರ್ಕಾರದಿಂದ ನೀಡಲಾಗುವ ಸವಲತ್ತುಗಳನ್ನು ಸ್ವೀಕರಿಸುವುದು ಅಕ್ಷಮ್ಯ ಅಪರಾಧ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್‍ಸ್‌ನ ಅಧ್ಯಕ್ಷ ಹೆಚ್.ಜಿ.ಗಂಗರಾಜು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಗೋಷ್ಠಿಯಲ್ಲಿ ಬುದ್ಧ ಭಾರತ ಫೌಂಡೇಷನ್‌ನ ಅಧ್ಯಕ್ಷ ಜೆ.ರಾಮಯ್ಯ, ಅಮ್ಜದ್ ಪಾಷ, ಡಾ.ಶ್ರೀನಿವಾಸ್, ಸಿದ್ದರಾಮು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

11 mins ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

24 mins ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

2 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

2 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

3 hours ago