ಮದ್ದೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ನಲ್ಲಿ ತೆರಳುತ್ತಿದ್ದ ಓರ್ವ ಮೃತಪಟ್ಟು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಪಟ್ಟಣದ ಶಿವಪುರದ ಸತ್ಯಾಗ್ರಹ ಸೌಧದ ಬಳಿ ಸಂಭವಿಸಿದೆ.
ತಾಲ್ಲೂಕಿನ ಕದಲೂರು ಗ್ರಾಮದ ಬಾಲುಗೌಡ(24) ಮೃತಪಟ್ಟವರು. ಇವರು ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದರು. ಬೈಕ್ ಸವಾರ ಜೀವನ್ಗೌಡ ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲುಗೌಡ ಹಾಗೂ ಜೀವನಗೌಡ ಇಬ್ಬರೂ ಒಂದೇ ಬೈಕ್ನಲ್ಲಿ ಕಾರ್ಯನಿಮಿತ್ತ ಮದ್ದೂರಿಗೆ ಆಗಮಿಸಿ, ವಾಪಸ್ ಕದಲೂರು ಗ್ರಾಮಕ್ಕೆ ತೆರಳುವಾಗ ಶಿವಪುರದ ಸತ್ಯಾಗ್ರಹ ಸೌಧದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…