ಮಂಡ್ಯ

ಜನನ ಮರಣ ನೋಂದಣಿಯನ್ನು ಸಕಾಲದಲ್ಲಿ ಮಾಡಿ : ಜಿಲ್ಲಾಧಿಕಾರಿ ಡಾ ಎಚ್ ಎನ್ ಗೋಪಾಲ ಕೃಷ್ಣ

 ’ಮಂಡ್ಯ : ಜಿಲ್ಲೆಯಲ್ಲಿ  ಮರಣ ನೋಂದಣಿ ಅಧಿನಿಯಮ 1969 ರ ಪ್ರಕಾರ ನೋಂದಣಾಧಿಕಾರಿಗಳು/ ಉಪನೋಂಧಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ, ನಿರ್ಜೀವ ಜನನ ಮತ್ತು ಮರಣ ಘಟನೆಗಳನ್ನು ನಿಗಧಿತ ಅವಧಿಯಲ್ಲಿ ನೊಂದಾಯಿಸಿ ಶೇ 100 ರ ಗುರಿ ಸಾಧಿಸಬೇಕು ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ತಯಿಯ ಅಧಾರ್ ಕಾರ್ಡ್ ಸೇರಿದಂತೆ ಪೂರಕ ದಾಖಲಾತಿಗಳನ್ನು ಪಡೆದುಕೊಂಡು ವಿಳಂಬ ಮಾಡದೇ ಜನನದ ನೊಂದಣಿ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಜನನ ಪ್ರಮಾಣ ಪತ್ರ ಇಲ್ಲದ ಮಕ್ಕಳ ಪ್ರಮಾಣ ಬಹಳ ಕಡಿಮೆ ಇದೆ. ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವಾಗ ಆಧಾರ್ ಸಂಖ್ಯೆಯನ್ನು ಕಡ್ಡಾಯ ಪಡೆಯಲಾಗುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಬಳಿ ಜನನ ಪ್ರಮಾಣ ಪತ್ರ ಇಲ್ಲದಿದ್ದಾರೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಈ-ಜನ್ಮ ತಂತ್ರಾಂಶದಲ್ಲಿ ವಿಳಂಬ ಒಂದು ವರ್ಷದೊಳಗೆ ಘಟಿಸಿದ ಘಟನೆಗಳನ್ನು ನೊಂದಣಿ ಮಾಡುವಾಗ ಗ್ರಾಮಾಂತರ ಪ್ರದೇಶದಲ್ಲಿ ತಹಶೀಲ್ದಾರ್, ನಗರ ಪ್ರದೇಶದಲ್ಲಿ ಆಯುಕ್ತರು/ ಮುಖ್ಯಾಧಿಕಾರಿಗಳ ಅದೇಶ ಪಡೆಯಬೇಕಿರುತ್ತದೆ. ಒಂದು ವರ್ಷದ ನಂತರ ಘಟನೆಗಳಿಗೆ ಜೆ.ಎಂ.ಎಫ್.ಸಿ ಮುಖಾಂತರ ಆದೇಶ ಪಡೆದು ನೊಂದಣಿ ಮಾಡಬೇಕಿರುತ್ತದೆ. ಕಡ್ಡಾಯವಾಗಿ ನಾಗರೀಕ ನೊಂದಣಿ ನಿಯಮದ ಸಂಖ್ಯೆ ನಮೂದಿಸಬೇಕಿರುತ್ತದೆ. ಇದನ್ನು ಪಾಲಿಸುವಂತೆ ಸೂಚನೆ ನೀಡಿದರು.
2015 ನೇ ಸಾಲಿಗೂ ಹಿಂದಿನ ಸಾಲುಗಳಲ್ಲಿ ಘಟಿಸಲಾದ ಜನನ, ಮರಣದ ನೊಂದಣಿಗಳನ್ನು ಡಿಜಿಟಲೈಸ್ ಮಾಡಿ ಈ- ಜನ್ಮ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದ್ದು, ಇದಕ್ಕೆ ಬೇಕಿರುವ ಅಗತ್ಯ ಸಹಕಾರವನ್ನು ತಾಲ್ಲೂಕು ಮಟ್ಟದಲ್ಲಿ ಒದಗಿಸುವಂತೆ ತಿಳಿಸಿದರು.
ಬೆಳೆ ವಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಹೋಬಳಿವಾರು/ ಗ್ರಾಮ ಪಂಚಾಯಿತಿ ವಾರು ಬೆಳೆ ಕಟಾವು ಪ್ರಯೋಗಗಳನ್ನು ನಡೆಸಿ ಅದರ ವಿವರವನ್ನು ಅಪ್‍ಲೋಡ್ ಮಾಡುವ ಸಂದರ್ಭದಲ್ಲಿ ಛಾಯಚಿತ್ರ ಹಾಗೂ ವಿವರಗಳನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ತಿಳಿಸಿದರು.
11 ನೇ ಕೃಷಿ ಗಣತಿ : ಜಿಲ್ಲೆಯಲ್ಲಿ 11 ನೇ ಕೃಷಿ ಗಣತಿ ನಡೆಸಲು ವೇಳಪಟ್ಟಿಯನ್ನು ನಿಗಧಿಪಡಿಸಿ ಸರ್ಕಾರ ನೀಡಿರುವ ಸೂಚನೆಗಳನ್ವಯ ಪೂರ್ಣಗೊಳಿಸಬೇಕು. ಈ ಕೆಲಸ ತ್ವರಿತಗತಿಯಲ್ಲಿ ಆಗಬೇಕು ಎಂದರು. ಇದೇ ಸಂದರ್ಭದಲ್ಲಿ ಕೃಷಿ ಗಣತಿ 2021-22 ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್. ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ:ಧನಂಜಯ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಂಖ್ಯ ಸಂಗ್ರಹಣಾಧಿಕಾರಿ ಶಿವಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

2 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

3 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

3 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

3 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

4 hours ago