ಮಂಡ್ಯ

ಜನನ ಮರಣ ನೋಂದಣಿಯನ್ನು ಸಕಾಲದಲ್ಲಿ ಮಾಡಿ : ಜಿಲ್ಲಾಧಿಕಾರಿ ಡಾ ಎಚ್ ಎನ್ ಗೋಪಾಲ ಕೃಷ್ಣ

 ’ಮಂಡ್ಯ : ಜಿಲ್ಲೆಯಲ್ಲಿ  ಮರಣ ನೋಂದಣಿ ಅಧಿನಿಯಮ 1969 ರ ಪ್ರಕಾರ ನೋಂದಣಾಧಿಕಾರಿಗಳು/ ಉಪನೋಂಧಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ, ನಿರ್ಜೀವ ಜನನ ಮತ್ತು ಮರಣ ಘಟನೆಗಳನ್ನು ನಿಗಧಿತ ಅವಧಿಯಲ್ಲಿ ನೊಂದಾಯಿಸಿ ಶೇ 100 ರ ಗುರಿ ಸಾಧಿಸಬೇಕು ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ತಯಿಯ ಅಧಾರ್ ಕಾರ್ಡ್ ಸೇರಿದಂತೆ ಪೂರಕ ದಾಖಲಾತಿಗಳನ್ನು ಪಡೆದುಕೊಂಡು ವಿಳಂಬ ಮಾಡದೇ ಜನನದ ನೊಂದಣಿ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಜನನ ಪ್ರಮಾಣ ಪತ್ರ ಇಲ್ಲದ ಮಕ್ಕಳ ಪ್ರಮಾಣ ಬಹಳ ಕಡಿಮೆ ಇದೆ. ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವಾಗ ಆಧಾರ್ ಸಂಖ್ಯೆಯನ್ನು ಕಡ್ಡಾಯ ಪಡೆಯಲಾಗುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಬಳಿ ಜನನ ಪ್ರಮಾಣ ಪತ್ರ ಇಲ್ಲದಿದ್ದಾರೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಈ-ಜನ್ಮ ತಂತ್ರಾಂಶದಲ್ಲಿ ವಿಳಂಬ ಒಂದು ವರ್ಷದೊಳಗೆ ಘಟಿಸಿದ ಘಟನೆಗಳನ್ನು ನೊಂದಣಿ ಮಾಡುವಾಗ ಗ್ರಾಮಾಂತರ ಪ್ರದೇಶದಲ್ಲಿ ತಹಶೀಲ್ದಾರ್, ನಗರ ಪ್ರದೇಶದಲ್ಲಿ ಆಯುಕ್ತರು/ ಮುಖ್ಯಾಧಿಕಾರಿಗಳ ಅದೇಶ ಪಡೆಯಬೇಕಿರುತ್ತದೆ. ಒಂದು ವರ್ಷದ ನಂತರ ಘಟನೆಗಳಿಗೆ ಜೆ.ಎಂ.ಎಫ್.ಸಿ ಮುಖಾಂತರ ಆದೇಶ ಪಡೆದು ನೊಂದಣಿ ಮಾಡಬೇಕಿರುತ್ತದೆ. ಕಡ್ಡಾಯವಾಗಿ ನಾಗರೀಕ ನೊಂದಣಿ ನಿಯಮದ ಸಂಖ್ಯೆ ನಮೂದಿಸಬೇಕಿರುತ್ತದೆ. ಇದನ್ನು ಪಾಲಿಸುವಂತೆ ಸೂಚನೆ ನೀಡಿದರು.
2015 ನೇ ಸಾಲಿಗೂ ಹಿಂದಿನ ಸಾಲುಗಳಲ್ಲಿ ಘಟಿಸಲಾದ ಜನನ, ಮರಣದ ನೊಂದಣಿಗಳನ್ನು ಡಿಜಿಟಲೈಸ್ ಮಾಡಿ ಈ- ಜನ್ಮ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದ್ದು, ಇದಕ್ಕೆ ಬೇಕಿರುವ ಅಗತ್ಯ ಸಹಕಾರವನ್ನು ತಾಲ್ಲೂಕು ಮಟ್ಟದಲ್ಲಿ ಒದಗಿಸುವಂತೆ ತಿಳಿಸಿದರು.
ಬೆಳೆ ವಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಹೋಬಳಿವಾರು/ ಗ್ರಾಮ ಪಂಚಾಯಿತಿ ವಾರು ಬೆಳೆ ಕಟಾವು ಪ್ರಯೋಗಗಳನ್ನು ನಡೆಸಿ ಅದರ ವಿವರವನ್ನು ಅಪ್‍ಲೋಡ್ ಮಾಡುವ ಸಂದರ್ಭದಲ್ಲಿ ಛಾಯಚಿತ್ರ ಹಾಗೂ ವಿವರಗಳನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ತಿಳಿಸಿದರು.
11 ನೇ ಕೃಷಿ ಗಣತಿ : ಜಿಲ್ಲೆಯಲ್ಲಿ 11 ನೇ ಕೃಷಿ ಗಣತಿ ನಡೆಸಲು ವೇಳಪಟ್ಟಿಯನ್ನು ನಿಗಧಿಪಡಿಸಿ ಸರ್ಕಾರ ನೀಡಿರುವ ಸೂಚನೆಗಳನ್ವಯ ಪೂರ್ಣಗೊಳಿಸಬೇಕು. ಈ ಕೆಲಸ ತ್ವರಿತಗತಿಯಲ್ಲಿ ಆಗಬೇಕು ಎಂದರು. ಇದೇ ಸಂದರ್ಭದಲ್ಲಿ ಕೃಷಿ ಗಣತಿ 2021-22 ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್. ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ:ಧನಂಜಯ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಂಖ್ಯ ಸಂಗ್ರಹಣಾಧಿಕಾರಿ ಶಿವಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

2 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

2 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

2 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

2 hours ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

2 hours ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

2 hours ago