ಮಂಡ್ಯ

ಜನನ ಮರಣ ನೋಂದಣಿಯನ್ನು ಸಕಾಲದಲ್ಲಿ ಮಾಡಿ : ಜಿಲ್ಲಾಧಿಕಾರಿ ಡಾ ಎಚ್ ಎನ್ ಗೋಪಾಲ ಕೃಷ್ಣ

 ’ಮಂಡ್ಯ : ಜಿಲ್ಲೆಯಲ್ಲಿ  ಮರಣ ನೋಂದಣಿ ಅಧಿನಿಯಮ 1969 ರ ಪ್ರಕಾರ ನೋಂದಣಾಧಿಕಾರಿಗಳು/ ಉಪನೋಂಧಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ, ನಿರ್ಜೀವ ಜನನ ಮತ್ತು ಮರಣ ಘಟನೆಗಳನ್ನು ನಿಗಧಿತ ಅವಧಿಯಲ್ಲಿ ನೊಂದಾಯಿಸಿ ಶೇ 100 ರ ಗುರಿ ಸಾಧಿಸಬೇಕು ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ತಯಿಯ ಅಧಾರ್ ಕಾರ್ಡ್ ಸೇರಿದಂತೆ ಪೂರಕ ದಾಖಲಾತಿಗಳನ್ನು ಪಡೆದುಕೊಂಡು ವಿಳಂಬ ಮಾಡದೇ ಜನನದ ನೊಂದಣಿ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಜನನ ಪ್ರಮಾಣ ಪತ್ರ ಇಲ್ಲದ ಮಕ್ಕಳ ಪ್ರಮಾಣ ಬಹಳ ಕಡಿಮೆ ಇದೆ. ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವಾಗ ಆಧಾರ್ ಸಂಖ್ಯೆಯನ್ನು ಕಡ್ಡಾಯ ಪಡೆಯಲಾಗುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಬಳಿ ಜನನ ಪ್ರಮಾಣ ಪತ್ರ ಇಲ್ಲದಿದ್ದಾರೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಈ-ಜನ್ಮ ತಂತ್ರಾಂಶದಲ್ಲಿ ವಿಳಂಬ ಒಂದು ವರ್ಷದೊಳಗೆ ಘಟಿಸಿದ ಘಟನೆಗಳನ್ನು ನೊಂದಣಿ ಮಾಡುವಾಗ ಗ್ರಾಮಾಂತರ ಪ್ರದೇಶದಲ್ಲಿ ತಹಶೀಲ್ದಾರ್, ನಗರ ಪ್ರದೇಶದಲ್ಲಿ ಆಯುಕ್ತರು/ ಮುಖ್ಯಾಧಿಕಾರಿಗಳ ಅದೇಶ ಪಡೆಯಬೇಕಿರುತ್ತದೆ. ಒಂದು ವರ್ಷದ ನಂತರ ಘಟನೆಗಳಿಗೆ ಜೆ.ಎಂ.ಎಫ್.ಸಿ ಮುಖಾಂತರ ಆದೇಶ ಪಡೆದು ನೊಂದಣಿ ಮಾಡಬೇಕಿರುತ್ತದೆ. ಕಡ್ಡಾಯವಾಗಿ ನಾಗರೀಕ ನೊಂದಣಿ ನಿಯಮದ ಸಂಖ್ಯೆ ನಮೂದಿಸಬೇಕಿರುತ್ತದೆ. ಇದನ್ನು ಪಾಲಿಸುವಂತೆ ಸೂಚನೆ ನೀಡಿದರು.
2015 ನೇ ಸಾಲಿಗೂ ಹಿಂದಿನ ಸಾಲುಗಳಲ್ಲಿ ಘಟಿಸಲಾದ ಜನನ, ಮರಣದ ನೊಂದಣಿಗಳನ್ನು ಡಿಜಿಟಲೈಸ್ ಮಾಡಿ ಈ- ಜನ್ಮ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದ್ದು, ಇದಕ್ಕೆ ಬೇಕಿರುವ ಅಗತ್ಯ ಸಹಕಾರವನ್ನು ತಾಲ್ಲೂಕು ಮಟ್ಟದಲ್ಲಿ ಒದಗಿಸುವಂತೆ ತಿಳಿಸಿದರು.
ಬೆಳೆ ವಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಹೋಬಳಿವಾರು/ ಗ್ರಾಮ ಪಂಚಾಯಿತಿ ವಾರು ಬೆಳೆ ಕಟಾವು ಪ್ರಯೋಗಗಳನ್ನು ನಡೆಸಿ ಅದರ ವಿವರವನ್ನು ಅಪ್‍ಲೋಡ್ ಮಾಡುವ ಸಂದರ್ಭದಲ್ಲಿ ಛಾಯಚಿತ್ರ ಹಾಗೂ ವಿವರಗಳನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ತಿಳಿಸಿದರು.
11 ನೇ ಕೃಷಿ ಗಣತಿ : ಜಿಲ್ಲೆಯಲ್ಲಿ 11 ನೇ ಕೃಷಿ ಗಣತಿ ನಡೆಸಲು ವೇಳಪಟ್ಟಿಯನ್ನು ನಿಗಧಿಪಡಿಸಿ ಸರ್ಕಾರ ನೀಡಿರುವ ಸೂಚನೆಗಳನ್ವಯ ಪೂರ್ಣಗೊಳಿಸಬೇಕು. ಈ ಕೆಲಸ ತ್ವರಿತಗತಿಯಲ್ಲಿ ಆಗಬೇಕು ಎಂದರು. ಇದೇ ಸಂದರ್ಭದಲ್ಲಿ ಕೃಷಿ ಗಣತಿ 2021-22 ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್. ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ:ಧನಂಜಯ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಂಖ್ಯ ಸಂಗ್ರಹಣಾಧಿಕಾರಿ ಶಿವಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

16 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago