ಮಂಡ್ಯ

ಜನನ ಮರಣ ನೋಂದಣಿಯನ್ನು ಸಕಾಲದಲ್ಲಿ ಮಾಡಿ : ಜಿಲ್ಲಾಧಿಕಾರಿ ಡಾ ಎಚ್ ಎನ್ ಗೋಪಾಲ ಕೃಷ್ಣ

 ’ಮಂಡ್ಯ : ಜಿಲ್ಲೆಯಲ್ಲಿ  ಮರಣ ನೋಂದಣಿ ಅಧಿನಿಯಮ 1969 ರ ಪ್ರಕಾರ ನೋಂದಣಾಧಿಕಾರಿಗಳು/ ಉಪನೋಂಧಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ, ನಿರ್ಜೀವ ಜನನ ಮತ್ತು ಮರಣ ಘಟನೆಗಳನ್ನು ನಿಗಧಿತ ಅವಧಿಯಲ್ಲಿ ನೊಂದಾಯಿಸಿ ಶೇ 100 ರ ಗುರಿ ಸಾಧಿಸಬೇಕು ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ತಯಿಯ ಅಧಾರ್ ಕಾರ್ಡ್ ಸೇರಿದಂತೆ ಪೂರಕ ದಾಖಲಾತಿಗಳನ್ನು ಪಡೆದುಕೊಂಡು ವಿಳಂಬ ಮಾಡದೇ ಜನನದ ನೊಂದಣಿ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಜನನ ಪ್ರಮಾಣ ಪತ್ರ ಇಲ್ಲದ ಮಕ್ಕಳ ಪ್ರಮಾಣ ಬಹಳ ಕಡಿಮೆ ಇದೆ. ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವಾಗ ಆಧಾರ್ ಸಂಖ್ಯೆಯನ್ನು ಕಡ್ಡಾಯ ಪಡೆಯಲಾಗುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಬಳಿ ಜನನ ಪ್ರಮಾಣ ಪತ್ರ ಇಲ್ಲದಿದ್ದಾರೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಈ-ಜನ್ಮ ತಂತ್ರಾಂಶದಲ್ಲಿ ವಿಳಂಬ ಒಂದು ವರ್ಷದೊಳಗೆ ಘಟಿಸಿದ ಘಟನೆಗಳನ್ನು ನೊಂದಣಿ ಮಾಡುವಾಗ ಗ್ರಾಮಾಂತರ ಪ್ರದೇಶದಲ್ಲಿ ತಹಶೀಲ್ದಾರ್, ನಗರ ಪ್ರದೇಶದಲ್ಲಿ ಆಯುಕ್ತರು/ ಮುಖ್ಯಾಧಿಕಾರಿಗಳ ಅದೇಶ ಪಡೆಯಬೇಕಿರುತ್ತದೆ. ಒಂದು ವರ್ಷದ ನಂತರ ಘಟನೆಗಳಿಗೆ ಜೆ.ಎಂ.ಎಫ್.ಸಿ ಮುಖಾಂತರ ಆದೇಶ ಪಡೆದು ನೊಂದಣಿ ಮಾಡಬೇಕಿರುತ್ತದೆ. ಕಡ್ಡಾಯವಾಗಿ ನಾಗರೀಕ ನೊಂದಣಿ ನಿಯಮದ ಸಂಖ್ಯೆ ನಮೂದಿಸಬೇಕಿರುತ್ತದೆ. ಇದನ್ನು ಪಾಲಿಸುವಂತೆ ಸೂಚನೆ ನೀಡಿದರು.
2015 ನೇ ಸಾಲಿಗೂ ಹಿಂದಿನ ಸಾಲುಗಳಲ್ಲಿ ಘಟಿಸಲಾದ ಜನನ, ಮರಣದ ನೊಂದಣಿಗಳನ್ನು ಡಿಜಿಟಲೈಸ್ ಮಾಡಿ ಈ- ಜನ್ಮ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದ್ದು, ಇದಕ್ಕೆ ಬೇಕಿರುವ ಅಗತ್ಯ ಸಹಕಾರವನ್ನು ತಾಲ್ಲೂಕು ಮಟ್ಟದಲ್ಲಿ ಒದಗಿಸುವಂತೆ ತಿಳಿಸಿದರು.
ಬೆಳೆ ವಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಹೋಬಳಿವಾರು/ ಗ್ರಾಮ ಪಂಚಾಯಿತಿ ವಾರು ಬೆಳೆ ಕಟಾವು ಪ್ರಯೋಗಗಳನ್ನು ನಡೆಸಿ ಅದರ ವಿವರವನ್ನು ಅಪ್‍ಲೋಡ್ ಮಾಡುವ ಸಂದರ್ಭದಲ್ಲಿ ಛಾಯಚಿತ್ರ ಹಾಗೂ ವಿವರಗಳನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ತಿಳಿಸಿದರು.
11 ನೇ ಕೃಷಿ ಗಣತಿ : ಜಿಲ್ಲೆಯಲ್ಲಿ 11 ನೇ ಕೃಷಿ ಗಣತಿ ನಡೆಸಲು ವೇಳಪಟ್ಟಿಯನ್ನು ನಿಗಧಿಪಡಿಸಿ ಸರ್ಕಾರ ನೀಡಿರುವ ಸೂಚನೆಗಳನ್ವಯ ಪೂರ್ಣಗೊಳಿಸಬೇಕು. ಈ ಕೆಲಸ ತ್ವರಿತಗತಿಯಲ್ಲಿ ಆಗಬೇಕು ಎಂದರು. ಇದೇ ಸಂದರ್ಭದಲ್ಲಿ ಕೃಷಿ ಗಣತಿ 2021-22 ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್. ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ:ಧನಂಜಯ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಂಖ್ಯ ಸಂಗ್ರಹಣಾಧಿಕಾರಿ ಶಿವಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

34 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

38 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

43 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

54 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

59 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

1 hour ago