ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ನಾಲ್ಕನೇ ದಿನವಾದ ಇಂದು ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ನಿಡಘಟ್ಟದಿಂದ ಪಾದಯಾತ್ರೆಯನ್ನು ಆರಂಭಿಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಈ ಚಳುವಳಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೆಜ್ಜೆ ಹಾಕೋಣ, ಭ್ರಷ್ಟ ಸರ್ಕಾರಕ್ಕೆ ಈ ಮೂಲಕ ಚುರುಕು ಮುಟ್ಟಿಸೋಣ ಎಂದು ಕರೆ ಕೊಟ್ಟಿದ್ದಾರೆ.
ಇಂದಿನ ಪಾದಯಾತ್ರೆಯಲ್ಲೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ.
ಇಂದಿನ ಪಾದಯಾತ್ರೆ ಮಾರ್ಗದಲ್ಲಿಯೂ ಕೂಡ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಸಭೆ ನಡೆಸಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳನ್ನು ಕುರಿತು ಚರ್ಚೆ ನಡೆಸಲಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…