Categories: ಮಂಡ್ಯ

ಮೊಸರಲ್ಲಿ ಕಲ್ಲು ಹುಡುಕುವ ಬಿಜೆಪಿ: ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ: ಬಿಪಿಎಲ್‌ ಕಾರ್ಡ್‌ ರದ್ದತಿ ಕುರಿತು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮದು ಜನಪರ ಸರ್ಕಾರ. ಯಾವುದೇ ಬಡವರ ಬಿಪಿಎಲ್‌ ಕಾರ್ಡ್‌ ರದ್ದಾಗಲ್ಲ. ಬಿಜೆಪಿಯವರು ಮುಂದಿನ ಗುರಿ ಬಗ್ಗೆ ತಿಳಿಸಲಿ. ಮೊಸರಲ್ಲಿ ಕಲ್ಲು ಹುಡುಕುವ ಬಿಡಲಿ ಎಂದು ಕುಟುಕಿದರು.

ಸುಮಲತಾ 5 ವರ್ಷ ಸಂಸದೆಯಾಗಿ ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ ಆಡಳಿತ ಕಾಲದಲ್ಲಿ ರೈತರಿಗೆ ಬಹಳಷ್ಟು ಅನ್ಯಾಯವಾಗಿದೆ. ಇದರ ಬಗ್ಗೆ ಸುಮಲತಾ ಹೋರಾಟ ಮಾಡಲಿ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

1 hour ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

2 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

2 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

2 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

2 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

2 hours ago