ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಲರ್ಟ್ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.





