ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಕಳೆದ ಫೆಬ್ರವರಿ 16ರಂದು ಇದೇ ರೀತಿಯ ಬೆದರಿಕೆ ಬಂದಿದ್ದು, ಇದೀಗ ಮತ್ತೆ ಪುನರಾವರ್ತನೆಯಾಗಿದೆ.
ಬೆದರಿಕೆ ಇ-ಮೇಲ್ ಬಂದ ತಕ್ಷಣವೇ ಕೋರ್ಟ್ ಆವರಣದಲ್ಲಿ ಆತಂಕ ಹೆಚ್ಚಾಗಿದೆ. ವಕೀಲರು ಕಲಾಪ ನಿಲ್ಲಿಸಿ ಹೊರಗೆ ಬಂದಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸೇರಿ ಕೋರ್ಟ್ ಆವರಣದಲ್ಲಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಅಗ್ನಿಶಾಮಕ ದಳವೂ ಸ್ಥಳದಲ್ಲಿದೆ.
ಬೆದರಿಕೆಯ ನಡುವೆಯೂ ಕೆಲವು ಕಲಾಪಗಳು ಮುಂದುವರಿದಿದ್ದರೂ, ಬಹುತೇಕ ವಕೀಲರು ಹಾಗೂ ಸಾರ್ವಜನಿಕರು ಆವರಣದಿಂದ ಹೊರಬಂದಿದ್ದಾರೆ. ಪೊಲೀಸರು ಇ-ಮೇಲ್ನ ಮೂಲ ಟ್ರೇಸ್ ಮಾಡುವ ಕೆಲಸ ಆರಂಭಿಸಿದ್ದಾರೆ.
ಫೆಬ್ರವರಿ 16ರಂದು ಸಹ ಬಂದಿತ್ತು ಬೆದರಿಕೆ
ಕಳೆದ ಫೆಬ್ರವರಿ 16ರಂದು ಧಾರವಾಡ ಹೈಕೋರ್ಟ್ ಪೀಠ ಸೇರಿದಂತೆ ಮಂಡ್ಯ, ಹಾವೇರಿ, ಕೊಡಗು, ದಾವಣಗೆರೆ ಸೇರಿ 10ಕ್ಕೂ ಹೆಚ್ಚು ನ್ಯಾಯಾಲಯಗಳಿಗೆ ಒಂದೇ ದಿನ ಇ-ಮೇಲ್ ಬಾಂಬ್ ಬೆದರಿಕೆ ಬಂದಿತ್ತು. ಆಗಲೂ ಬಾಂಬ್ ಸ್ಕ್ವಾಡ್, ಶ್ವಾನ ದಳದಿಂದ ಶೋಧ ನಡೆದು ಎಲ್ಲಾ ಬೆದರಿಕೆಗಳು ಹುಸಿ ಎಂದು ದೃಢಪಟ್ಟಿತ್ತು. ಆದರೆ ಈಗ ಮತ್ತೆ ಮಂಡ್ಯ ಕೋರ್ಟ್ಗೆ ಪುನರಾವರ್ತನೆಯಾಗಿದೆ.
ಪೊಲೀಸ್ ತನಿಖೆ ತೀವ್ರಗೊಂಡಿದೆ. ಬೆದರಿಕೆಯ ಮೂಲ ಗುರುತಿಸಲು ಸೈಬರ್ ಸೆಲ್ ಕೂಡ ಸಕ್ರಿಯವಾಗಿದೆ. ಕೋರ್ಟ್ ಕಲಾಪಗಳು ಸುರಕ್ಷತಾ ಕಾರಣದಿಂದ ಸ್ಥಗಿತಗೊಂಡಿವೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…