ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಕಳೆದ ಫೆಬ್ರವರಿ 16ರಂದು ಇದೇ ರೀತಿಯ ಬೆದರಿಕೆ ಬಂದಿದ್ದು, ಇದೀಗ ಮತ್ತೆ ಪುನರಾವರ್ತನೆಯಾಗಿದೆ.
ಬೆದರಿಕೆ ಇ-ಮೇಲ್ ಬಂದ ತಕ್ಷಣವೇ ಕೋರ್ಟ್ ಆವರಣದಲ್ಲಿ ಆತಂಕ ಹೆಚ್ಚಾಗಿದೆ. ವಕೀಲರು ಕಲಾಪ ನಿಲ್ಲಿಸಿ ಹೊರಗೆ ಬಂದಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸೇರಿ ಕೋರ್ಟ್ ಆವರಣದಲ್ಲಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಅಗ್ನಿಶಾಮಕ ದಳವೂ ಸ್ಥಳದಲ್ಲಿದೆ.
ಬೆದರಿಕೆಯ ನಡುವೆಯೂ ಕೆಲವು ಕಲಾಪಗಳು ಮುಂದುವರಿದಿದ್ದರೂ, ಬಹುತೇಕ ವಕೀಲರು ಹಾಗೂ ಸಾರ್ವಜನಿಕರು ಆವರಣದಿಂದ ಹೊರಬಂದಿದ್ದಾರೆ. ಪೊಲೀಸರು ಇ-ಮೇಲ್ನ ಮೂಲ ಟ್ರೇಸ್ ಮಾಡುವ ಕೆಲಸ ಆರಂಭಿಸಿದ್ದಾರೆ.
ಫೆಬ್ರವರಿ 16ರಂದು ಸಹ ಬಂದಿತ್ತು ಬೆದರಿಕೆ
ಕಳೆದ ಫೆಬ್ರವರಿ 16ರಂದು ಧಾರವಾಡ ಹೈಕೋರ್ಟ್ ಪೀಠ ಸೇರಿದಂತೆ ಮಂಡ್ಯ, ಹಾವೇರಿ, ಕೊಡಗು, ದಾವಣಗೆರೆ ಸೇರಿ 10ಕ್ಕೂ ಹೆಚ್ಚು ನ್ಯಾಯಾಲಯಗಳಿಗೆ ಒಂದೇ ದಿನ ಇ-ಮೇಲ್ ಬಾಂಬ್ ಬೆದರಿಕೆ ಬಂದಿತ್ತು. ಆಗಲೂ ಬಾಂಬ್ ಸ್ಕ್ವಾಡ್, ಶ್ವಾನ ದಳದಿಂದ ಶೋಧ ನಡೆದು ಎಲ್ಲಾ ಬೆದರಿಕೆಗಳು ಹುಸಿ ಎಂದು ದೃಢಪಟ್ಟಿತ್ತು. ಆದರೆ ಈಗ ಮತ್ತೆ ಮಂಡ್ಯ ಕೋರ್ಟ್ಗೆ ಪುನರಾವರ್ತನೆಯಾಗಿದೆ.
ಪೊಲೀಸ್ ತನಿಖೆ ತೀವ್ರಗೊಂಡಿದೆ. ಬೆದರಿಕೆಯ ಮೂಲ ಗುರುತಿಸಲು ಸೈಬರ್ ಸೆಲ್ ಕೂಡ ಸಕ್ರಿಯವಾಗಿದೆ. ಕೋರ್ಟ್ ಕಲಾಪಗಳು ಸುರಕ್ಷತಾ ಕಾರಣದಿಂದ ಸ್ಥಗಿತಗೊಂಡಿವೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…