ಮಂಡ್ಯ

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಕಳೆದ ಫೆಬ್ರವರಿ 16ರಂದು ಇದೇ ರೀತಿಯ ಬೆದರಿಕೆ ಬಂದಿದ್ದು, ಇದೀಗ ಮತ್ತೆ ಪುನರಾವರ್ತನೆಯಾಗಿದೆ.

ಬೆದರಿಕೆ ಇ-ಮೇಲ್ ಬಂದ ತಕ್ಷಣವೇ ಕೋರ್ಟ್ ಆವರಣದಲ್ಲಿ ಆತಂಕ ಹೆಚ್ಚಾಗಿದೆ. ವಕೀಲರು ಕಲಾಪ ನಿಲ್ಲಿಸಿ ಹೊರಗೆ ಬಂದಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸೇರಿ ಕೋರ್ಟ್ ಆವರಣದಲ್ಲಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಅಗ್ನಿಶಾಮಕ ದಳವೂ ಸ್ಥಳದಲ್ಲಿದೆ.

ಬೆದರಿಕೆಯ ನಡುವೆಯೂ ಕೆಲವು ಕಲಾಪಗಳು ಮುಂದುವರಿದಿದ್ದರೂ, ಬಹುತೇಕ ವಕೀಲರು ಹಾಗೂ ಸಾರ್ವಜನಿಕರು ಆವರಣದಿಂದ ಹೊರಬಂದಿದ್ದಾರೆ. ಪೊಲೀಸರು ಇ-ಮೇಲ್‌ನ ಮೂಲ ಟ್ರೇಸ್ ಮಾಡುವ ಕೆಲಸ ಆರಂಭಿಸಿದ್ದಾರೆ.

ಫೆಬ್ರವರಿ 16ರಂದು ಸಹ ಬಂದಿತ್ತು ಬೆದರಿಕೆ
ಕಳೆದ ಫೆಬ್ರವರಿ 16ರಂದು ಧಾರವಾಡ ಹೈಕೋರ್ಟ್ ಪೀಠ ಸೇರಿದಂತೆ ಮಂಡ್ಯ, ಹಾವೇರಿ, ಕೊಡಗು, ದಾವಣಗೆರೆ ಸೇರಿ 10ಕ್ಕೂ ಹೆಚ್ಚು ನ್ಯಾಯಾಲಯಗಳಿಗೆ ಒಂದೇ ದಿನ ಇ-ಮೇಲ್ ಬಾಂಬ್ ಬೆದರಿಕೆ ಬಂದಿತ್ತು. ಆಗಲೂ ಬಾಂಬ್ ಸ್ಕ್ವಾಡ್, ಶ್ವಾನ ದಳದಿಂದ ಶೋಧ ನಡೆದು ಎಲ್ಲಾ ಬೆದರಿಕೆಗಳು ಹುಸಿ ಎಂದು ದೃಢಪಟ್ಟಿತ್ತು. ಆದರೆ ಈಗ ಮತ್ತೆ ಮಂಡ್ಯ ಕೋರ್ಟ್‌ಗೆ ಪುನರಾವರ್ತನೆಯಾಗಿದೆ.

ಪೊಲೀಸ್ ತನಿಖೆ ತೀವ್ರಗೊಂಡಿದೆ. ಬೆದರಿಕೆಯ ಮೂಲ ಗುರುತಿಸಲು ಸೈಬರ್ ಸೆಲ್ ಕೂಡ ಸಕ್ರಿಯವಾಗಿದೆ. ಕೋರ್ಟ್ ಕಲಾಪಗಳು ಸುರಕ್ಷತಾ ಕಾರಣದಿಂದ ಸ್ಥಗಿತಗೊಂಡಿವೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

8 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

10 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago