ಮಂಡ್ಯ

ಮಂಡ್ಯ ಸಮ್ಮೇಳನದಲ್ಲಿ ʻಆಡಳಿತದ ಅಂಗಳದಲ್ಲಿʼ ಪುಸ್ತಕ ಮಾರಾಟ : ಟಿ.ತಮ್ಮೇಗೌಡ

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ `ಆಡಳಿತದ ಅಂಗಳದಲ್ಲಿ’ ಎಂಬ ಪುಸ್ತಕವನ್ನು ಮಾರಾಟಕ್ಕೆ ಇಟ್ಟಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಟಿ.ತಮ್ಮೇಗೌಡ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಎಲ್.ನಾಗೇಗೌಡರ ನಂತರ ಹಿರಿಯ ಐಎಎಸ್ ಅಧಿಕಾರಿ ತಿಮ್ಮೇಗೌಡರು ಎಂಬುದು ಜನಜನಿತವಾಗಿದ್ದು, ಸಾಹಿತ್ಯದಲ್ಲಿಯೂ ಆಸಕ್ತ ಹೊಂದಿದವನಾಗಿ ಪುಸ್ತಕ ಬರೆದಿದ್ದೇನೆ. ನನ್ನ ಎಲ್ಲಾ ಪುಸ್ತಕಗಳಿಗೂ ನನ್ನ ಗುರುಗಳು ಹಾಗೂ ಸಾಹಿತ್ಯ ಸಮ್ಮೇಳನದ ಹಾಲಿ ಅಧ್ಯಕ್ಷ ಗೊ.ರೂ.ಚನ್ನಬಸಪ್ಪ ಅವರೇ ಮುನ್ನುಡಿ ಬರೆದಿದ್ದಾರೆ ಎಂದರು.

ಬೆರಳೆಣಿಕೆ ದಿನಗಳ ಹಿಂದಷ್ಟೇ ಮುದ್ರಣಗೊಂಡ `ಆಡಳಿತದ ಅಂಗಳದಲ್ಲಿ’ ಪುಸ್ತಕಕ್ಕೂ ಗೊ.ರೂ.ಚನ್ನಬಸಪ್ಪ ಅವರು ಹಾರೈಕೆಗಳನ್ನು ಬರೆದಿದ್ದು, ಮತ್ತೋರ್ವ ಐಎಎಸ್ ನಿವೃತ್ತ ಅಧಿಕಾರಿ ಚಿರಂಜೀವಿಸಿಂಗ್ ಅವರು ಪುಸ್ತಕದ ಹಿನ್ನುಡಿಯನ್ನು ಬರೆದಿದ್ದಾರೆ ಎಂದು ಹೇಳಿದರು.

`ಆಡಳಿತದ ಅಂಗಳದಲ್ಲಿ’ ಪುಸ್ತಕವು ಮಂಡ್ಯ ಜಿಲ್ಲೆಯ ಸಮಸ್ಯೆಗಳು, ಅಧಿಕಾರಿಗಳ ಆಡಳಿತದಲ್ಲಿನ ಭ್ರಷ್ಟತೆ, ಜಿಲ್ಲೆಯ ಅಭಿವೃದ್ಧಿಗೆ ಸಲಹೆಗಳನ್ನು ನೀಡಲಾಗಿದೆ. ಮಂಡ್ಯ ಜಿಲ್ಲೆ ಹಿಂದಿನ ನಾಯಕರಿಗೆ ಹೋಲಿಕೆ ಮಾಡಿದರೆ ಇಂದು ಅಭಿವೃದ್ಧಿಯ ಹಾದಿಯಲ್ಲಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಸಾವಯವ ಕೃಷಿ, ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಕಾವೇರಿ ವಿವಾದದ ಸಮಸ್ಯೆ ಸಂಬಂಧ ಪುಸ್ತಕದಲ್ಲಿ ಉಲ್ಲೇಖವಿದ್ದು, ಸಾಹಿತ್ಯ ಸಮ್ಮೇಳನದ ಎರಡು ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ನುಡಿದರು.

ಮಂಡ್ಯ ಜಿಲ್ಲೆಯ ಜನರು `ಆಡಳಿತದ ಅಂಗಳದಲ್ಲಿ’ವು ಓದಲೇಬೇಕಾದ ಪುಸ್ತಕವಾಗಿದೆ. ಇಲ್ಲಿನ ಸಮಗ್ರ ಮಾಹಿತಿಯನ್ನು ತಿಳಿಯುವುದು ಅವರ ಹಕ್ಕಾಗಿದ್ದು, ಪುಸ್ತಕವನ್ನು ಕೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ೩ ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ನನಗೂ ಆಹ್ವಾನ ಬಂದಿದೆ. ಜಿಲ್ಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಸಬೇಕೆಂದು ಕೋರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago