ಮಂಡ್ಯ

ಮಂಡ್ಯ ಸಮ್ಮೇಳನದಲ್ಲಿ ʻಆಡಳಿತದ ಅಂಗಳದಲ್ಲಿʼ ಪುಸ್ತಕ ಮಾರಾಟ : ಟಿ.ತಮ್ಮೇಗೌಡ

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ `ಆಡಳಿತದ ಅಂಗಳದಲ್ಲಿ’ ಎಂಬ ಪುಸ್ತಕವನ್ನು ಮಾರಾಟಕ್ಕೆ ಇಟ್ಟಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಟಿ.ತಮ್ಮೇಗೌಡ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಎಲ್.ನಾಗೇಗೌಡರ ನಂತರ ಹಿರಿಯ ಐಎಎಸ್ ಅಧಿಕಾರಿ ತಿಮ್ಮೇಗೌಡರು ಎಂಬುದು ಜನಜನಿತವಾಗಿದ್ದು, ಸಾಹಿತ್ಯದಲ್ಲಿಯೂ ಆಸಕ್ತ ಹೊಂದಿದವನಾಗಿ ಪುಸ್ತಕ ಬರೆದಿದ್ದೇನೆ. ನನ್ನ ಎಲ್ಲಾ ಪುಸ್ತಕಗಳಿಗೂ ನನ್ನ ಗುರುಗಳು ಹಾಗೂ ಸಾಹಿತ್ಯ ಸಮ್ಮೇಳನದ ಹಾಲಿ ಅಧ್ಯಕ್ಷ ಗೊ.ರೂ.ಚನ್ನಬಸಪ್ಪ ಅವರೇ ಮುನ್ನುಡಿ ಬರೆದಿದ್ದಾರೆ ಎಂದರು.

ಬೆರಳೆಣಿಕೆ ದಿನಗಳ ಹಿಂದಷ್ಟೇ ಮುದ್ರಣಗೊಂಡ `ಆಡಳಿತದ ಅಂಗಳದಲ್ಲಿ’ ಪುಸ್ತಕಕ್ಕೂ ಗೊ.ರೂ.ಚನ್ನಬಸಪ್ಪ ಅವರು ಹಾರೈಕೆಗಳನ್ನು ಬರೆದಿದ್ದು, ಮತ್ತೋರ್ವ ಐಎಎಸ್ ನಿವೃತ್ತ ಅಧಿಕಾರಿ ಚಿರಂಜೀವಿಸಿಂಗ್ ಅವರು ಪುಸ್ತಕದ ಹಿನ್ನುಡಿಯನ್ನು ಬರೆದಿದ್ದಾರೆ ಎಂದು ಹೇಳಿದರು.

`ಆಡಳಿತದ ಅಂಗಳದಲ್ಲಿ’ ಪುಸ್ತಕವು ಮಂಡ್ಯ ಜಿಲ್ಲೆಯ ಸಮಸ್ಯೆಗಳು, ಅಧಿಕಾರಿಗಳ ಆಡಳಿತದಲ್ಲಿನ ಭ್ರಷ್ಟತೆ, ಜಿಲ್ಲೆಯ ಅಭಿವೃದ್ಧಿಗೆ ಸಲಹೆಗಳನ್ನು ನೀಡಲಾಗಿದೆ. ಮಂಡ್ಯ ಜಿಲ್ಲೆ ಹಿಂದಿನ ನಾಯಕರಿಗೆ ಹೋಲಿಕೆ ಮಾಡಿದರೆ ಇಂದು ಅಭಿವೃದ್ಧಿಯ ಹಾದಿಯಲ್ಲಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಸಾವಯವ ಕೃಷಿ, ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಕಾವೇರಿ ವಿವಾದದ ಸಮಸ್ಯೆ ಸಂಬಂಧ ಪುಸ್ತಕದಲ್ಲಿ ಉಲ್ಲೇಖವಿದ್ದು, ಸಾಹಿತ್ಯ ಸಮ್ಮೇಳನದ ಎರಡು ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ನುಡಿದರು.

ಮಂಡ್ಯ ಜಿಲ್ಲೆಯ ಜನರು `ಆಡಳಿತದ ಅಂಗಳದಲ್ಲಿ’ವು ಓದಲೇಬೇಕಾದ ಪುಸ್ತಕವಾಗಿದೆ. ಇಲ್ಲಿನ ಸಮಗ್ರ ಮಾಹಿತಿಯನ್ನು ತಿಳಿಯುವುದು ಅವರ ಹಕ್ಕಾಗಿದ್ದು, ಪುಸ್ತಕವನ್ನು ಕೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ೩ ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ನನಗೂ ಆಹ್ವಾನ ಬಂದಿದೆ. ಜಿಲ್ಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಸಬೇಕೆಂದು ಕೋರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

29 mins ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

54 mins ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

1 hour ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

1 hour ago

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

1 hour ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

2 hours ago