ಮಂಡ್ಯ

ಮಂಡ್ಯ ಸಮ್ಮೇಳನದಲ್ಲಿ ʻಆಡಳಿತದ ಅಂಗಳದಲ್ಲಿʼ ಪುಸ್ತಕ ಮಾರಾಟ : ಟಿ.ತಮ್ಮೇಗೌಡ

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ `ಆಡಳಿತದ ಅಂಗಳದಲ್ಲಿ’ ಎಂಬ ಪುಸ್ತಕವನ್ನು ಮಾರಾಟಕ್ಕೆ ಇಟ್ಟಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಟಿ.ತಮ್ಮೇಗೌಡ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಎಲ್.ನಾಗೇಗೌಡರ ನಂತರ ಹಿರಿಯ ಐಎಎಸ್ ಅಧಿಕಾರಿ ತಿಮ್ಮೇಗೌಡರು ಎಂಬುದು ಜನಜನಿತವಾಗಿದ್ದು, ಸಾಹಿತ್ಯದಲ್ಲಿಯೂ ಆಸಕ್ತ ಹೊಂದಿದವನಾಗಿ ಪುಸ್ತಕ ಬರೆದಿದ್ದೇನೆ. ನನ್ನ ಎಲ್ಲಾ ಪುಸ್ತಕಗಳಿಗೂ ನನ್ನ ಗುರುಗಳು ಹಾಗೂ ಸಾಹಿತ್ಯ ಸಮ್ಮೇಳನದ ಹಾಲಿ ಅಧ್ಯಕ್ಷ ಗೊ.ರೂ.ಚನ್ನಬಸಪ್ಪ ಅವರೇ ಮುನ್ನುಡಿ ಬರೆದಿದ್ದಾರೆ ಎಂದರು.

ಬೆರಳೆಣಿಕೆ ದಿನಗಳ ಹಿಂದಷ್ಟೇ ಮುದ್ರಣಗೊಂಡ `ಆಡಳಿತದ ಅಂಗಳದಲ್ಲಿ’ ಪುಸ್ತಕಕ್ಕೂ ಗೊ.ರೂ.ಚನ್ನಬಸಪ್ಪ ಅವರು ಹಾರೈಕೆಗಳನ್ನು ಬರೆದಿದ್ದು, ಮತ್ತೋರ್ವ ಐಎಎಸ್ ನಿವೃತ್ತ ಅಧಿಕಾರಿ ಚಿರಂಜೀವಿಸಿಂಗ್ ಅವರು ಪುಸ್ತಕದ ಹಿನ್ನುಡಿಯನ್ನು ಬರೆದಿದ್ದಾರೆ ಎಂದು ಹೇಳಿದರು.

`ಆಡಳಿತದ ಅಂಗಳದಲ್ಲಿ’ ಪುಸ್ತಕವು ಮಂಡ್ಯ ಜಿಲ್ಲೆಯ ಸಮಸ್ಯೆಗಳು, ಅಧಿಕಾರಿಗಳ ಆಡಳಿತದಲ್ಲಿನ ಭ್ರಷ್ಟತೆ, ಜಿಲ್ಲೆಯ ಅಭಿವೃದ್ಧಿಗೆ ಸಲಹೆಗಳನ್ನು ನೀಡಲಾಗಿದೆ. ಮಂಡ್ಯ ಜಿಲ್ಲೆ ಹಿಂದಿನ ನಾಯಕರಿಗೆ ಹೋಲಿಕೆ ಮಾಡಿದರೆ ಇಂದು ಅಭಿವೃದ್ಧಿಯ ಹಾದಿಯಲ್ಲಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಸಾವಯವ ಕೃಷಿ, ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಕಾವೇರಿ ವಿವಾದದ ಸಮಸ್ಯೆ ಸಂಬಂಧ ಪುಸ್ತಕದಲ್ಲಿ ಉಲ್ಲೇಖವಿದ್ದು, ಸಾಹಿತ್ಯ ಸಮ್ಮೇಳನದ ಎರಡು ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ನುಡಿದರು.

ಮಂಡ್ಯ ಜಿಲ್ಲೆಯ ಜನರು `ಆಡಳಿತದ ಅಂಗಳದಲ್ಲಿ’ವು ಓದಲೇಬೇಕಾದ ಪುಸ್ತಕವಾಗಿದೆ. ಇಲ್ಲಿನ ಸಮಗ್ರ ಮಾಹಿತಿಯನ್ನು ತಿಳಿಯುವುದು ಅವರ ಹಕ್ಕಾಗಿದ್ದು, ಪುಸ್ತಕವನ್ನು ಕೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ೩ ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ನನಗೂ ಆಹ್ವಾನ ಬಂದಿದೆ. ಜಿಲ್ಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಸಬೇಕೆಂದು ಕೋರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago