ಮಂಡ್ಯ

ಮಂಡ್ಯ ಸಮ್ಮೇಳನದಲ್ಲಿ ʻಆಡಳಿತದ ಅಂಗಳದಲ್ಲಿʼ ಪುಸ್ತಕ ಮಾರಾಟ : ಟಿ.ತಮ್ಮೇಗೌಡ

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ `ಆಡಳಿತದ ಅಂಗಳದಲ್ಲಿ’ ಎಂಬ ಪುಸ್ತಕವನ್ನು ಮಾರಾಟಕ್ಕೆ ಇಟ್ಟಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಟಿ.ತಮ್ಮೇಗೌಡ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಎಲ್.ನಾಗೇಗೌಡರ ನಂತರ ಹಿರಿಯ ಐಎಎಸ್ ಅಧಿಕಾರಿ ತಿಮ್ಮೇಗೌಡರು ಎಂಬುದು ಜನಜನಿತವಾಗಿದ್ದು, ಸಾಹಿತ್ಯದಲ್ಲಿಯೂ ಆಸಕ್ತ ಹೊಂದಿದವನಾಗಿ ಪುಸ್ತಕ ಬರೆದಿದ್ದೇನೆ. ನನ್ನ ಎಲ್ಲಾ ಪುಸ್ತಕಗಳಿಗೂ ನನ್ನ ಗುರುಗಳು ಹಾಗೂ ಸಾಹಿತ್ಯ ಸಮ್ಮೇಳನದ ಹಾಲಿ ಅಧ್ಯಕ್ಷ ಗೊ.ರೂ.ಚನ್ನಬಸಪ್ಪ ಅವರೇ ಮುನ್ನುಡಿ ಬರೆದಿದ್ದಾರೆ ಎಂದರು.

ಬೆರಳೆಣಿಕೆ ದಿನಗಳ ಹಿಂದಷ್ಟೇ ಮುದ್ರಣಗೊಂಡ `ಆಡಳಿತದ ಅಂಗಳದಲ್ಲಿ’ ಪುಸ್ತಕಕ್ಕೂ ಗೊ.ರೂ.ಚನ್ನಬಸಪ್ಪ ಅವರು ಹಾರೈಕೆಗಳನ್ನು ಬರೆದಿದ್ದು, ಮತ್ತೋರ್ವ ಐಎಎಸ್ ನಿವೃತ್ತ ಅಧಿಕಾರಿ ಚಿರಂಜೀವಿಸಿಂಗ್ ಅವರು ಪುಸ್ತಕದ ಹಿನ್ನುಡಿಯನ್ನು ಬರೆದಿದ್ದಾರೆ ಎಂದು ಹೇಳಿದರು.

`ಆಡಳಿತದ ಅಂಗಳದಲ್ಲಿ’ ಪುಸ್ತಕವು ಮಂಡ್ಯ ಜಿಲ್ಲೆಯ ಸಮಸ್ಯೆಗಳು, ಅಧಿಕಾರಿಗಳ ಆಡಳಿತದಲ್ಲಿನ ಭ್ರಷ್ಟತೆ, ಜಿಲ್ಲೆಯ ಅಭಿವೃದ್ಧಿಗೆ ಸಲಹೆಗಳನ್ನು ನೀಡಲಾಗಿದೆ. ಮಂಡ್ಯ ಜಿಲ್ಲೆ ಹಿಂದಿನ ನಾಯಕರಿಗೆ ಹೋಲಿಕೆ ಮಾಡಿದರೆ ಇಂದು ಅಭಿವೃದ್ಧಿಯ ಹಾದಿಯಲ್ಲಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಸಾವಯವ ಕೃಷಿ, ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಕಾವೇರಿ ವಿವಾದದ ಸಮಸ್ಯೆ ಸಂಬಂಧ ಪುಸ್ತಕದಲ್ಲಿ ಉಲ್ಲೇಖವಿದ್ದು, ಸಾಹಿತ್ಯ ಸಮ್ಮೇಳನದ ಎರಡು ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ನುಡಿದರು.

ಮಂಡ್ಯ ಜಿಲ್ಲೆಯ ಜನರು `ಆಡಳಿತದ ಅಂಗಳದಲ್ಲಿ’ವು ಓದಲೇಬೇಕಾದ ಪುಸ್ತಕವಾಗಿದೆ. ಇಲ್ಲಿನ ಸಮಗ್ರ ಮಾಹಿತಿಯನ್ನು ತಿಳಿಯುವುದು ಅವರ ಹಕ್ಕಾಗಿದ್ದು, ಪುಸ್ತಕವನ್ನು ಕೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ೩ ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ನನಗೂ ಆಹ್ವಾನ ಬಂದಿದೆ. ಜಿಲ್ಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಸಬೇಕೆಂದು ಕೋರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

3 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

4 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

5 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

6 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

6 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

8 hours ago