ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ.
ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್ ಗೌಡ (೧೦) ಮೃತಪಟ್ಟ ಬಾಲಕ.
ಗೊರವಾಲೆಯ ದೊಡ್ಡಪ್ಪನ ಮನೆಗೆ ಹಬ್ಬಕ್ಕೆ ತೆರಳಿದ್ದ ಬಾಲಕ ಗೆಳೆಯರೊಂದಿಗೆ ಸೋಮವಾರ ಮಧ್ಯಾಹ್ನ ಮಲ್ಲಿಗೆರೆ ಫಾರಂ ಬಳಿಯ ನಾಲೆಯಲ್ಲಿ ಆಟವಾಡುತ್ತಿದ್ದಾಗ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿ ಕೊಚ್ಚಿ ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೃತ ದೇಹ ಮಂಗಳವಾರ ಮಧ್ಯಾಹ್ನ ಬಿ.ಹೊಸೂರು ಬಳಿಯ ವಿದ್ಯುತ್ ತಯಾರಿಕಾ ಘಟಕದ ಬಳಿ ಪತ್ತೆಯಾಗಿದೆ.ಬಳಿಕ ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಲಾಯಿತು. ಜಿಲ್ಲಾಸ್ಪತ್ರೆಗೆ ಆಗಮಿಸಿದ ಶಾಸಕ ಎಂ.ಶ್ರೀನಿವಾಸ್ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದರು.ಇನ್ನು ಘಟನೆಯ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…