ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ.
ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್ ಗೌಡ (೧೦) ಮೃತಪಟ್ಟ ಬಾಲಕ.
ಗೊರವಾಲೆಯ ದೊಡ್ಡಪ್ಪನ ಮನೆಗೆ ಹಬ್ಬಕ್ಕೆ ತೆರಳಿದ್ದ ಬಾಲಕ ಗೆಳೆಯರೊಂದಿಗೆ ಸೋಮವಾರ ಮಧ್ಯಾಹ್ನ ಮಲ್ಲಿಗೆರೆ ಫಾರಂ ಬಳಿಯ ನಾಲೆಯಲ್ಲಿ ಆಟವಾಡುತ್ತಿದ್ದಾಗ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿ ಕೊಚ್ಚಿ ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೃತ ದೇಹ ಮಂಗಳವಾರ ಮಧ್ಯಾಹ್ನ ಬಿ.ಹೊಸೂರು ಬಳಿಯ ವಿದ್ಯುತ್ ತಯಾರಿಕಾ ಘಟಕದ ಬಳಿ ಪತ್ತೆಯಾಗಿದೆ.ಬಳಿಕ ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಲಾಯಿತು. ಜಿಲ್ಲಾಸ್ಪತ್ರೆಗೆ ಆಗಮಿಸಿದ ಶಾಸಕ ಎಂ.ಶ್ರೀನಿವಾಸ್ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದರು.ಇನ್ನು ಘಟನೆಯ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…