ಮಂಡ್ಯ

ನಾಲೆಯಲ್ಲಿ ಮುಳುಗಿ ಬಾಲಕ ಸಾವು

ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ.
ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್‌ ಗೌಡ (೧೦) ಮೃತಪಟ್ಟ ಬಾಲಕ.
ಗೊರವಾಲೆಯ ದೊಡ್ಡಪ್ಪನ ಮನೆಗೆ ಹಬ್ಬಕ್ಕೆ ತೆರಳಿದ್ದ ಬಾಲಕ ಗೆಳೆಯರೊಂದಿಗೆ ಸೋಮವಾರ ಮಧ್ಯಾಹ್ನ ಮಲ್ಲಿಗೆರೆ ಫಾರಂ ಬಳಿಯ ನಾಲೆಯಲ್ಲಿ ಆಟವಾಡುತ್ತಿದ್ದಾಗ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿ ಕೊಚ್ಚಿ ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೃತ ದೇಹ ಮಂಗಳವಾರ ಮಧ್ಯಾಹ್ನ ಬಿ.ಹೊಸೂರು ಬಳಿಯ ವಿದ್ಯುತ್ ತಯಾರಿಕಾ ಘಟಕದ ಬಳಿ ಪತ್ತೆಯಾಗಿದೆ.ಬಳಿಕ ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಲಾಯಿತು. ಜಿಲ್ಲಾಸ್ಪತ್ರೆಗೆ ಆಗಮಿಸಿದ ಶಾಸಕ ಎಂ.ಶ್ರೀನಿವಾಸ್ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದರು.ಇನ್ನು ಘಟನೆಯ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago