Categories: ಮಂಡ್ಯ

ಹಳೇ ದ್ವೇಷ: ಯುವಕನ ಮೇಲೆ ಭೀಕರ ಹಲ್ಲೆ

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಮಂದಿಯ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಉದಯಗಿರಿ ಬಡಾವಣೆಯ ಕಿರಣ್ ಅಲಿಯಾಸ್ ಮರಿಕೆರೆ (೨೬) ಎಂಬಾತನೇ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತೆಯಲ್ಲಿ ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾನೆ.

ಈತನ ಮೇಲೆ ನಗರದ ವರ್ಧನ್, ವರುಣ್, ಮನು, ಗೋವಿಂದರಾಜು, ಮದನ್ ಅವರು ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ.

ಹಲ್ಲೆಗೊಳಗಾದ ಕಿರಣ್ ಮತ್ತು ವರ್ಧನ್ ಇಬ್ಬರೂ ನಗರದಲ್ಲಿ ತಳ್ಳುವ ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ಆಗಾಗ್ಗೆ ಸಣ್ಣಪುಟ್ಟ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಕಿರಣ್ ಇತ್ತೀಚೆಗೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ, ಕಳೆದ ಎರಡು ಮೂರು ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಮತ್ತೆ ಗಲಾಟೆ ಮಾಡಿಕೊಂಡಿದ್ದ ಕಿರಣನನ್ನು ಹತ್ಯೆ ಮಾಡಲು ವರ್ಧನ್ ಯೋಜನೆ ರೂಪಿಸಿದ್ದ. ಅದರಂತೆ ಗೋಡನ್‌ನಲ್ಲಿ ಮಲಗಿದ್ದ ಕಿರಣ್ ಮೇಲೆ ವರ್ಧನ್ ಮತ್ತು ಇತರರು ಮಚ್ಚು, ಲಾಂಗುಗಳಿಂದ ತಲೆ, ಕೈ, ಕಾಲು ಇತರೆ ಕಡೆಗಳಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಗೋಡನ್‌ನಲ್ಲೇ ಮಲಗಿದ್ದ. ಆತನಿಗೆ ಊಟ ಕೊಡಲು ಬಂದವರು ಕಿರಣ್ ಗಾಯಗೊಂಡಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುವನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ತಿಮ್ಮಯ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

26 mins ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

33 mins ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

37 mins ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

2 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

5 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

10 hours ago