ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ ಕಾಲ ಪ್ರದರ್ಶನ ಇರುತ್ತದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಇಂದು ಬೂದನೂರು ಉತ್ಸವ 2026ರ ಪ್ರಯುಕ್ತ ಚಿಕ್ಕ ಮಂಡ್ಯದಲ್ಲಿ ಹೆಲಿಕಾಪ್ಟರ್ ರೈಡ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಜೊತೆಗೆ ಜಿಲ್ಲೆಯ ಸಾರ್ವಜನಿಕರ ನೂತನವಾಗಿ ಕಾರ್ಯಕ್ರಮವನ್ನು ಮಾಡುವ ನಿಟ್ಟಿನಲ್ಲಿ ಬೂದನೂರು ಉತ್ಸವ ಪ್ರಯುಕ್ತ ಹೆಲಿ ಟೂರಿಸಂ ಅನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಬೂದನೂರು ಉತ್ಸವವನ್ನು ಮೊದಲನೇ ವರ್ಷ ತುಂಬಾ ಯಶಸ್ವಿಯಾಗಿ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಬಹಳ ವಿಭಿನ್ನವಾಗಿ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಬೂದನೂರು ಉತ್ಸವ -2026 ರ ಪ್ರಯುಕ್ತ ಏರ್ಪಡಿಸಲಗಿದ್ದ ವಿವಿಧ ರೀತಿಯ ಕ್ರೀಡೆ ಮತ್ತು ರಂಗೋಲಿ ಸ್ಪರ್ಧೆಗಳ ಕಾರ್ಯಕ್ರಮಗಳು ಬಹಳ ಯಶಸ್ವಿಯಾಗಿ ಪೂರ್ಣಗೊಂಡವೆ ಎಂದು ಹೇಳಿದರು.
ಮಾರ್ಚ್ 7 ರಂದು ಜಿಲ್ಲಾಡಳಿತ ವತಿಯಿಂದ “ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ” ಅರಿವು ಕಾರ್ಯಾಗಾರವನ್ನು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರುಗಳು ಕಾರ್ಯಗಾರ ಕಾರ್ಯಕ್ರಮಕ್ಕೆ ಭಾವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಸಕ ಪಿ.ರವಿಕುಮಾರ್, ಕೆ. ಎಂ ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಪೊಲೀಸ್ ಅಧೀಕ್ಷಕಿ ವಿ.ಜೆ.ಶೋಭಾ ರಾಣಿ, ಉಪ ವಿಭಾಗ ಅಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ವಿಶ್ವನಾಥ್ ಇನ್ನಿತರರಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…