ಮಂಡ್ಯ: ಬೂದನೂರು ಗ್ರಾಮ ಪಂಚಾಯತಿ ಕಸ ವಿಲೇವಾರಿಗೆ ಖರೀದಿಸಿದ ಆಟೋ ಬಳಕೆ ಮಾಡದೇ 4 ವರ್ಷಗಳಿಂದ ತುಕ್ಕು ಹಿಡಿಯುತ್ತಿರುವುದನ್ನು ವಿರೋಧಿಸಿ ಬೂದನೂರು ನಾಗರೀಕರು ಆಟೋ ತೊಳೆದು, ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ಮಾಡಿದರು.
ಗ್ರಾಮ ಪಂಚಾಯತಿ ಕಚೇರಿ ಬಳಿ ಜಮಾಯಿಸಿದ ಮಹಿಳೆಯರು ಆಟೋ ತೊಳೆದು, ಅರಿಸಿನ ಕುಂಕುಮ ಹಚ್ಚಿ ಹೂ ಮುಡಿಸಿ ಗಂಧದ ಕಡ್ಡಿ, ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.
ಐದಾರು ಲಕ್ಷ ರೂ. ಕೊಟ್ಟು 2021ರಲ್ಲಿ ಖರೀದಿಸಿದ ಆಟೋವನ್ನು ಗ್ರಾಮಸಭೆ ಡಂಗೂರ, ಬೀದಿ ದೀಪ ಅಳವಡಿಸಲು ಮುಂತಾಗಿ ಖಾಸಗಿ ಬಳಕೆ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದರು.
4 ವರ್ಷಗಳಲ್ಲಿ 2200 ಕಿ.ಮೀ ಬಳಕೆ ತೋರುತ್ತಿರುವ ಆಟೋ ಮೀಟರ್ ಗೆ ವಿಮೆ, ಸರ್ವೀಸ್ ಮುಂತಾಗಿ ಹೆಚ್ಚುವರಿ ವೆಚ್ಚ ಭರಿಸಲಾಗುತ್ತಿದೆ ಎಂದು ಆರೋಪಿಸಿದರು.
ಈ ಹಿಂದಿನ ಆಡಳಿತ ಮಂಡಳಿ ಘನತ್ಯಾಜ್ಯಕ್ಕೆ ಭೂಮಿ ನಿಗದಿ, ಪ್ರತಿ ಮನೆಗೆ ಕಸ ಸಂಗ್ರಹಕ್ಕೆ ಬಕೆಟ್ ನೀಡಿದೆ. ಅಲ್ಲದೆ ಸಾಮಾಗ್ರಿ ಖರೀದಿಗೆ ಬ್ಯಾಗ್ ವಿತರಿಸಿದೆ. ಪ್ರಸ್ತುತ ಆಡಳಿತ ಮಂಡಳಿ ಕಸ ವಿಲೇವಾರಿಗೆ ಅಗತ್ಯ ವೈಜ್ಞಾನಿಕ ಕ್ರಮ ಅನುಸರಿಸುತ್ತಿಲ್ಲ ಎಂದು ದೂರಿದರು.
ಕೂಡಲೇ ಕಸ ವಿಲೇವಾರಿಗೆ ಕ್ರಮ ವಹಿಸದಿದ್ದಲ್ಲಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಕಸ ಸುರಿಯುವ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಗ್ರಾಪಂ ಮಾಜಿ ಸದಸ್ಯರಾದ ಕುಳ್ಳ, ಸತೀಶ್ ಬೂಸ, ಸವಿತಾ, ಸುಧಾ, ಎಲ್ಲಮ್ಮ ಮೊದಲಾದವರಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…