ಮಂಡ್ಯ

ಬೂದನೂರು ಗ್ರಾ.ಪಂ | ಕಸ ವಿಲೇವಾರಿ ಆಟೋ ತೊಳೆದು ವಿನೂತನ ಪ್ರತಿಭಟನೆ

ಮಂಡ್ಯ: ಬೂದನೂರು ಗ್ರಾಮ ಪಂಚಾಯತಿ ಕಸ ವಿಲೇವಾರಿಗೆ ಖರೀದಿಸಿದ ಆಟೋ ಬಳಕೆ ಮಾಡದೇ 4 ವರ್ಷಗಳಿಂದ ತುಕ್ಕು ಹಿಡಿಯುತ್ತಿರುವುದನ್ನು ವಿರೋಧಿಸಿ ಬೂದನೂರು ನಾಗರೀಕರು ಆಟೋ ತೊಳೆದು, ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ಮಾಡಿದರು.

ಗ್ರಾಮ ಪಂಚಾಯತಿ ಕಚೇರಿ ಬಳಿ ಜಮಾಯಿಸಿದ ಮಹಿಳೆಯರು ಆಟೋ ತೊಳೆದು, ಅರಿಸಿನ ಕುಂಕುಮ ಹಚ್ಚಿ ಹೂ ಮುಡಿಸಿ ಗಂಧದ ಕಡ್ಡಿ, ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಐದಾರು ಲಕ್ಷ ರೂ. ಕೊಟ್ಟು 2021ರಲ್ಲಿ ಖರೀದಿಸಿದ ಆಟೋವನ್ನು ಗ್ರಾಮಸಭೆ ಡಂಗೂರ, ಬೀದಿ ದೀಪ ಅಳವಡಿಸಲು ಮುಂತಾಗಿ ಖಾಸಗಿ ಬಳಕೆ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದರು.

4 ವರ್ಷಗಳಲ್ಲಿ 2200 ಕಿ.ಮೀ ಬಳಕೆ ತೋರುತ್ತಿರುವ ಆಟೋ ಮೀಟರ್ ಗೆ ವಿಮೆ, ಸರ್ವೀಸ್ ಮುಂತಾಗಿ ಹೆಚ್ಚುವರಿ ವೆಚ್ಚ ಭರಿಸಲಾಗುತ್ತಿದೆ‌ ಎಂದು ಆರೋಪಿಸಿದರು.

ಈ ಹಿಂದಿನ ಆಡಳಿತ ಮಂಡಳಿ ಘನತ್ಯಾಜ್ಯಕ್ಕೆ ಭೂಮಿ ನಿಗದಿ, ಪ್ರತಿ ಮನೆಗೆ ಕಸ ಸಂಗ್ರಹಕ್ಕೆ ಬಕೆಟ್ ನೀಡಿದೆ. ಅಲ್ಲದೆ ಸಾಮಾಗ್ರಿ ಖರೀದಿಗೆ ಬ್ಯಾಗ್ ವಿತರಿಸಿದೆ. ಪ್ರಸ್ತುತ ಆಡಳಿತ ಮಂಡಳಿ ಕಸ ವಿಲೇವಾರಿಗೆ ಅಗತ್ಯ ವೈಜ್ಞಾನಿಕ ಕ್ರಮ ಅನುಸರಿಸುತ್ತಿಲ್ಲ ಎಂದು ದೂರಿದರು.

ಕೂಡಲೇ ಕಸ ವಿಲೇವಾರಿಗೆ ಕ್ರಮ ವಹಿಸದಿದ್ದಲ್ಲಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಕಸ ಸುರಿಯುವ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಗ್ರಾಪಂ ಮಾಜಿ ಸದಸ್ಯರಾದ ಕುಳ್ಳ, ಸತೀಶ್ ಬೂಸ, ಸವಿತಾ, ಸುಧಾ, ಎಲ್ಲಮ್ಮ ಮೊದಲಾದವರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

12 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

12 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

12 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

12 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

12 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 hours ago