ಮಂಡ್ಯ

ಬೂದನೂರು ಗ್ರಾ.ಪಂ | ಕಸ ವಿಲೇವಾರಿ ಆಟೋ ತೊಳೆದು ವಿನೂತನ ಪ್ರತಿಭಟನೆ

ಮಂಡ್ಯ: ಬೂದನೂರು ಗ್ರಾಮ ಪಂಚಾಯತಿ ಕಸ ವಿಲೇವಾರಿಗೆ ಖರೀದಿಸಿದ ಆಟೋ ಬಳಕೆ ಮಾಡದೇ 4 ವರ್ಷಗಳಿಂದ ತುಕ್ಕು ಹಿಡಿಯುತ್ತಿರುವುದನ್ನು ವಿರೋಧಿಸಿ ಬೂದನೂರು ನಾಗರೀಕರು ಆಟೋ ತೊಳೆದು, ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ಮಾಡಿದರು.

ಗ್ರಾಮ ಪಂಚಾಯತಿ ಕಚೇರಿ ಬಳಿ ಜಮಾಯಿಸಿದ ಮಹಿಳೆಯರು ಆಟೋ ತೊಳೆದು, ಅರಿಸಿನ ಕುಂಕುಮ ಹಚ್ಚಿ ಹೂ ಮುಡಿಸಿ ಗಂಧದ ಕಡ್ಡಿ, ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಐದಾರು ಲಕ್ಷ ರೂ. ಕೊಟ್ಟು 2021ರಲ್ಲಿ ಖರೀದಿಸಿದ ಆಟೋವನ್ನು ಗ್ರಾಮಸಭೆ ಡಂಗೂರ, ಬೀದಿ ದೀಪ ಅಳವಡಿಸಲು ಮುಂತಾಗಿ ಖಾಸಗಿ ಬಳಕೆ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದರು.

4 ವರ್ಷಗಳಲ್ಲಿ 2200 ಕಿ.ಮೀ ಬಳಕೆ ತೋರುತ್ತಿರುವ ಆಟೋ ಮೀಟರ್ ಗೆ ವಿಮೆ, ಸರ್ವೀಸ್ ಮುಂತಾಗಿ ಹೆಚ್ಚುವರಿ ವೆಚ್ಚ ಭರಿಸಲಾಗುತ್ತಿದೆ‌ ಎಂದು ಆರೋಪಿಸಿದರು.

ಈ ಹಿಂದಿನ ಆಡಳಿತ ಮಂಡಳಿ ಘನತ್ಯಾಜ್ಯಕ್ಕೆ ಭೂಮಿ ನಿಗದಿ, ಪ್ರತಿ ಮನೆಗೆ ಕಸ ಸಂಗ್ರಹಕ್ಕೆ ಬಕೆಟ್ ನೀಡಿದೆ. ಅಲ್ಲದೆ ಸಾಮಾಗ್ರಿ ಖರೀದಿಗೆ ಬ್ಯಾಗ್ ವಿತರಿಸಿದೆ. ಪ್ರಸ್ತುತ ಆಡಳಿತ ಮಂಡಳಿ ಕಸ ವಿಲೇವಾರಿಗೆ ಅಗತ್ಯ ವೈಜ್ಞಾನಿಕ ಕ್ರಮ ಅನುಸರಿಸುತ್ತಿಲ್ಲ ಎಂದು ದೂರಿದರು.

ಕೂಡಲೇ ಕಸ ವಿಲೇವಾರಿಗೆ ಕ್ರಮ ವಹಿಸದಿದ್ದಲ್ಲಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಕಸ ಸುರಿಯುವ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಗ್ರಾಪಂ ಮಾಜಿ ಸದಸ್ಯರಾದ ಕುಳ್ಳ, ಸತೀಶ್ ಬೂಸ, ಸವಿತಾ, ಸುಧಾ, ಎಲ್ಲಮ್ಮ ಮೊದಲಾದವರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

32 mins ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

3 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

4 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

6 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

6 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

10 hours ago