ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಖಂಡನೆ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಪಿಮುಷ್ಠಿಗೆ ಸಿಲುಕಿ ಸಾಲಗಾರರಾಗಿರುವುದು ೭೬ ವರ್ಷ ನಮ್ಮನ್ನಾಳಿದ ಸರ್ಕಾರಗಳ ಸಾಧನೆಯಾಗಿದೆ. ಇದರಿಂದಾಗಿ ಬಡತನ, ಆರ್ಥಿಕ ಹೀನತೆ ಮಿತಿ ಮೀರಿದ್ದು, ಕೊಲೆ, ಸುಲಿಗೆ, ದೌರ್ಜನ್ಯ, ಆತ್ಮಹತ್ಯೆಯಂತಹ ಕೃತ್ಯಗಳು ನಡೆಯುವಂತಾಗಿದೆ ಎಂದರು.
ಇದಕ್ಕೆ ಪ್ರತಿಕೂಲವೆಂಬಂತೆ ಜಾತಿ ವರದಿಜಾರಿ, ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದ ಕೇಂದ್ರ ಸರ್ಕಾರವು ನಾನು ಘೋಷಿಸಿದ ಬಜೆಟ್ನಲ್ಲಿ ರೈತ, ಕಾರ್ಮಿಕ, ಶೋಷಿತ, ಕೆಳಸಮುದಾಯ ವಿರೋಧಿತನವನ್ನು ತೋರುತ್ತಿದೆ. ಅಲ್ಲದೇ ಈ ಬಜೆಟ್ ಎಸ್ಸಿ ಎಸ್ಟಿ ವಿರೋಧಿ ಬಜೆಟ್ ಆಗಿದೆ ಎಂದು ಕಿಡಿ ಕಾರಿದರು.
ದೇಶ, ರಾಜ್ಯದಲ್ಲಿಯೂ ಸಹ ಶಿಕ್ಷಣ ಮತ್ತು ಆರೋಗ್ಯ ಸೇವೇ ವ್ಯಾಪಾರಿಕರಣಗೊಳಿಸಿ ಸಂವಿಧಾನ ವಿರೋಧಿ ಕೃತ್ಯ ವೆಸಗಿರುವ ಕೇಂದ್ರ ಸರ್ಕಾರ ಸಂವಿಧಾನಾತ್ಮಕವಾಗಿ ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ ನೀಡಲು ಎಷ್ಟೇ ಒತ್ತಾಯಿಸಿದರು, ಸ್ಪಂಧಿಸದೇ ಇರುವುದನ್ನು ಕದಸಂಸ ಖಂಡಿಸುತ್ತದೆ ಎಂದು ಹೇಳಿದರು.
ಮೈಸೂರು ವಿಭಾಗೀಯ ಸಂಚಾಲಕ ಕೆ.ಎಂ.ಅನಿಲ್ಕುಮಾರ್ ಮಾತನಾಡಿ, ಸರ್ಕಾರ ಖಾಸಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್ಗಳನ್ನು ಕೂಡಲೇ ಬಂದ್ ಮಾಡಿಸಬೇಕು, ಕಿರುಕುಳ ನೀಡುವ ಫೈನಾನ್ಸ್ ಮಾಲೀಕರು ಹಾಗೂ ಸಿಬ್ಬಂದಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು.
ಬಡ್ಡಿ, ಚಕ್ರ ಬಡ್ಡಿ ಮೂಲಕ ವಸೂಲಿ ಮಾಡಿದ ಹಣವನ್ನು ಮುಟಟುಗೋಲು ಹಾಕಿಕೊಂಡು ಸಂತ್ರಸ್ಥ ಕುಟುಂಬಕ್ಕೆ ಹಿಂದಿರುಗಿಸಬೇಕು. ಸಾಲ ವಸೂಲಾತಿ ಉಪಟಳದಿಂದ ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಮೈಕ್ರೋ ಫೈನಾನ್ಸ್ ಕಂಪನಿಗಳಿಂದಲೇ ತಲಾ ೫೦ ಲಕ್ಷ ಪರಿಹಾರ ನೀಡಲು ಕ್ರಮ ವಹಿಸಬೇಕು, ಮೈಕ್ರೋ ಫೈನಾನ್ಸ್ಗಳ ಸಾಲವನ್ನು ಕೇಂದ್ರ, ರಾಜ್ಯಸರ್ಕಾಗಳೇ ತುಂಬಿ ಜನರನ್ನು ಋಣ ಮುಕ್ತರಾಗಿಸಬೇಕು, ಜನರ ಜೀವ ಮತ್ತು ಮೂಲಭೂತ ಅವಶ್ಯಕತೆಗಳ ಸಂರಕ್ಷಣಾ ಕಾಯ್ದೆ ಜಾರಿಗೆ ಕೂಡಲೇ ಸುಘ್ರೀವಾಜ್ಞೆ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ್, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತ ಆನಂದ್, ತಿಮ್ಮೇಶ್, ಸುಮಾಮಣಿ, ಮುತ್ತುರಾಜು ಇದ್ದರು.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…