ಮಂಡ್ಯ

ದೇಶದ ಸಂಪತ್ತು ಹಂಚಿಕೆ ವೈಫಲ್ಯದ ಫಲವೇ ಬಂಡವಾಳ ಶಾಹಿ ಫೈನಾನ್ಸ್‌ ಕಿರುಕಳ: ದಸಂಸ

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಖಂಡನೆ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಪಿಮುಷ್ಠಿಗೆ ಸಿಲುಕಿ ಸಾಲಗಾರರಾಗಿರುವುದು ೭೬ ವರ್ಷ ನಮ್ಮನ್ನಾಳಿದ ಸರ್ಕಾರಗಳ ಸಾಧನೆಯಾಗಿದೆ. ಇದರಿಂದಾಗಿ ಬಡತನ, ಆರ್ಥಿಕ ಹೀನತೆ ಮಿತಿ ಮೀರಿದ್ದು, ಕೊಲೆ, ಸುಲಿಗೆ, ದೌರ್ಜನ್ಯ, ಆತ್ಮಹತ್ಯೆಯಂತಹ ಕೃತ್ಯಗಳು ನಡೆಯುವಂತಾಗಿದೆ ಎಂದರು.

ಇದಕ್ಕೆ ಪ್ರತಿಕೂಲವೆಂಬಂತೆ ಜಾತಿ ವರದಿಜಾರಿ, ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದ ಕೇಂದ್ರ ಸರ್ಕಾರವು ನಾನು ಘೋಷಿಸಿದ ಬಜೆಟ್‌ನಲ್ಲಿ ರೈತ, ಕಾರ್ಮಿಕ, ಶೋಷಿತ, ಕೆಳಸಮುದಾಯ ವಿರೋಧಿತನವನ್ನು ತೋರುತ್ತಿದೆ. ಅಲ್ಲದೇ ಈ ಬಜೆಟ್ ಎಸ್ಸಿ ಎಸ್ಟಿ ವಿರೋಧಿ ಬಜೆಟ್ ಆಗಿದೆ ಎಂದು ಕಿಡಿ ಕಾರಿದರು.

ದೇಶ, ರಾಜ್ಯದಲ್ಲಿಯೂ ಸಹ ಶಿಕ್ಷಣ ಮತ್ತು ಆರೋಗ್ಯ ಸೇವೇ ವ್ಯಾಪಾರಿಕರಣಗೊಳಿಸಿ ಸಂವಿಧಾನ ವಿರೋಧಿ ಕೃತ್ಯ ವೆಸಗಿರುವ ಕೇಂದ್ರ ಸರ್ಕಾರ ಸಂವಿಧಾನಾತ್ಮಕವಾಗಿ ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ ನೀಡಲು ಎಷ್ಟೇ ಒತ್ತಾಯಿಸಿದರು, ಸ್ಪಂಧಿಸದೇ ಇರುವುದನ್ನು ಕದಸಂಸ ಖಂಡಿಸುತ್ತದೆ ಎಂದು ಹೇಳಿದರು.

ಮೈಸೂರು ವಿಭಾಗೀಯ ಸಂಚಾಲಕ ಕೆ.ಎಂ.ಅನಿಲ್‌ಕುಮಾರ್ ಮಾತನಾಡಿ, ಸರ್ಕಾರ ಖಾಸಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳನ್ನು ಕೂಡಲೇ ಬಂದ್ ಮಾಡಿಸಬೇಕು, ಕಿರುಕುಳ ನೀಡುವ ಫೈನಾನ್ಸ್ ಮಾಲೀಕರು ಹಾಗೂ ಸಿಬ್ಬಂದಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು.

ಬಡ್ಡಿ, ಚಕ್ರ ಬಡ್ಡಿ ಮೂಲಕ ವಸೂಲಿ ಮಾಡಿದ ಹಣವನ್ನು ಮುಟಟುಗೋಲು ಹಾಕಿಕೊಂಡು ಸಂತ್ರಸ್ಥ ಕುಟುಂಬಕ್ಕೆ ಹಿಂದಿರುಗಿಸಬೇಕು. ಸಾಲ ವಸೂಲಾತಿ ಉಪಟಳದಿಂದ ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಮೈಕ್ರೋ ಫೈನಾನ್ಸ್ ಕಂಪನಿಗಳಿಂದಲೇ ತಲಾ ೫೦ ಲಕ್ಷ ಪರಿಹಾರ ನೀಡಲು ಕ್ರಮ ವಹಿಸಬೇಕು, ಮೈಕ್ರೋ ಫೈನಾನ್ಸ್‌ಗಳ ಸಾಲವನ್ನು ಕೇಂದ್ರ, ರಾಜ್ಯಸರ್ಕಾಗಳೇ ತುಂಬಿ ಜನರನ್ನು ಋಣ ಮುಕ್ತರಾಗಿಸಬೇಕು, ಜನರ ಜೀವ ಮತ್ತು ಮೂಲಭೂತ ಅವಶ್ಯಕತೆಗಳ ಸಂರಕ್ಷಣಾ ಕಾಯ್ದೆ ಜಾರಿಗೆ ಕೂಡಲೇ ಸುಘ್ರೀವಾಜ್ಞೆ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ್, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತ ಆನಂದ್, ತಿಮ್ಮೇಶ್, ಸುಮಾಮಣಿ, ಮುತ್ತುರಾಜು ಇದ್ದರು.

AddThis Website Tools
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮಾರ್ಚ್‌ 16 ಭಾನುವಾರ

18 mins ago

ಅಟ್ಲಾಂಟಿಕ್‌ ಮಹಾಸಾಗರದಲ್ಲಿ ದಾಖಲೆ ಬರೆದ ಅನನ್ಯ : ಸಿಎಂ ಶ್ಲಾಘನೆ

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…

9 hours ago

ಸಾರಾ ಮಹೇಶ್‌ ಪುತ್ರನ ಮದುವೆ ; ಎಚ್‌ಡಿಕೆ, ಕಿಚ್ಚ ಸುದೀಪ್‌ ಭಾಗಿ

ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…

9 hours ago

ಮೂಢನಂಬಿಕೆ ಮಹಿಳೆಯರ ಪಾಲಿನ ರಾಕ್ಷಸ ; ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…

10 hours ago

ಮಹಿಳೆ ನಾಯಕತ್ವ ಗುಣ ಬೆಳೆಸಿಕೊಳ್ಳಲಿ ; ಸಚಿವೆ ಹೆಬ್ಬಾಳಕರ್

 ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…

10 hours ago

ಮಂಡ್ಯ | ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರ ವಿವರ ಸಲ್ಲಿಸಿ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…

11 hours ago