ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು ಪತ್ತೆಯಾಗಿವೆ.
ಸ್ಕಾರ್ಪಿಯೋ ಕಾರಿನಲ್ಲಿ ಕರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕಾರಿನ ಚಾಲಕ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾರು ಯಾರಿಗೆ ಸೇರಿದ್ದು? ಕರುಗಳನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ.
ಕರುಗಳ ಶಬ್ದ ಬರಬಾರದೆಂದು ಅವುಗಳ ಬಾಯಿಯನ್ನು ಬಟ್ಟೆಯಿಂದ ಕಟ್ಟಲಾಗಿತ್ತು. ಜತೆಗೆ, ಕಾಲುಗಳನ್ನು ಕಟ್ಟಿ ಹಾಕಿದ್ದ ಕರುಗಳನ್ನು ಒಂದರ ಮೇಲೊಂದರಂತೆ ತುಂಬಿದ್ದ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಉಳಿದ ಕರುಗಳನ್ನು ರಕ್ಷಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲಿ ಮಗುಚಿ ಬಿದ್ದ ಹಿನ್ನೆಲೆಯಲ್ಲಿ ಕರುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…