ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಸಂಪೂರ್ಣ ಭಸ್ಮವಾಗಿದೆ. ರಾಜಸ್ಥಾನ ಮೂಲದ ವಿಕ್ಕಿ ಮತ್ತು ಸ್ನೇಹಿತರು ತಮಿಳುನಾಡಿನಲ್ಲಿ ಸ್ನೇಹಿತನ ಕಾರು ಪಡೆದು ರಾಜ್ಯ ಪ್ರವೇಶಿಸಿ ವ್ಯಾಪಾರದ ಹಿನ್ನೆಲೆಯಲ್ಲಿ ಮೈಸೂರಿಗೆ ತೆರಳುತ್ತಿದ್ದರು.
ಗಣಂಗೂರು ಬಳಿ ಹೊಗೆ ಕಾಣಿಸಿಕೊಂಡಿದ್ದು ಗೌಡಹಳ್ಳಿ ಗೆಟ್ ಬಳಿ ಬೆಂಕಿ ಹೊತ್ತಿಕೊಂಡಿದೆ, ತಕ್ಷಣ ಕಾರಿನಲ್ಲಿದ್ದ ಮೂವರು ಕೆಳಗೆ ಇಳಿದಿದ್ದು, ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರು ಸಂಪೂರ್ಣ ಸುಟ್ಟುಹೋಗಿದೆ,
ಕಾರಿನಲ್ಲಿದ್ದ ಎಲ್ಲರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.ಶ್ರೀರಂಗಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…