ಮಂಡ್ಯ: ತಾಲ್ಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯು ಮೃತಪಟ್ಟಿದ್ದು, ಪತಿಯೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು ಅವರ ಪತ್ನಿ ಎಚ್.ಎಸ್.ಸುನೀಲ(40) ಮೃತ ದಂಪತಿ. ಇಬ್ಬರೂ ಜೂ.3 ರ ಸೋಮವಾರ ಮಧ್ಯಾಹ್ನ 1 ಗಂಟೆ ವೇಳೆ ತಮ್ಮ ಹೀರೋಹೊಂಡ ಬೈಕ್ನಲ್ಲಿ ಕೆರಗೋಡು ಗ್ರಾಮದ ದೇವಾಲಯಕ್ಕೆ ಹೋಗುತ್ತಿದ್ದ ವೇಳೆ ಮರಿಲಿಂಗನದೊಡ್ಡಿಯ ಬಳಿ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಂಜು ಅವರ ಪತ್ನಿ ಸುನೀಲ ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರ ಗಾಯಗೊಂಡಿದ್ದ ಮಂಜು ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಸಿ.ಮಂಜು ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಸಿ.ಮಂಜು ಅವರ ಅಂಗಾಂಗವನ್ನು ಕುಟುಂಬದವರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮೃತರಿಗೆ ಓರ್ವ ಪುತ್ರ ಇದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಚಿಕ್ಕಬಾಣಸವಾಡಿಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದು, ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…