ಮಂಡ್ಯ : ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬ ಕಾರಿನಲ್ಲಿ ಪಾಂಡವಪುರದ ಕಡೆ ತೆರಳುತ್ತಿತ್ತು. ಕಾರನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದರಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಬಳಿಯ ವಿಸಿ ನಾಲೆಗೆ ಬಿದ್ದಿದೆ.
ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಕಾರು ಮುಳುಗಿಲ್ಲ. ಅವಘಡ ಕಂಡ ಮಾಚಹಳ್ಳಿ ಗ್ರಾಮಸ್ಥರು ಕೂಡಲೆ ಸ್ಥಳಕ್ಕೆ ಧಾವಿಸಿದ್ದಾರೆ. ನಂತರ ಕಾರಿನಲ್ಲಿದ್ದ ನಾಲ್ಕು ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…