ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ.
ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಹಾರಿದೆ. ಲೋಕೇಶ್ ಅವರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮತ್ತು ಲೋಕೇಶ್ ಅವರ ಮೃತದೇಹವನ್ನು ಮೇಲೆತ್ತಲು ಕಾಲುವೆಯ ನೀರನ್ನು ಕಡಿಮೆ ಮಾಡಲು ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ತಡೆಗೋಡೆ ಇಲ್ಲ : ಈ ಘಟನೆ ನಡೆಯಲು ಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕಾರಣವಾಗಿದ್ದು, 2017 ರಲ್ಲೂ ತಡೆಗೋಡೆ ಇಲ್ಲದೇ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ಬಸ್ ದುರಂತ ಸಂಭವಿಸಿ 34 ಮಂದಿ ಮೃತಪಟ್ಟಿದ್ದರು. ಈ ಘಟನೆಯ ಬಳಿಕ ವಿ.ನಾಲೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲೆಲ್ಲ ತಡೆಗೋಡೆ ನಿರ್ಮಿಸುವುದಾಗಿ ಅಂದಿನ ಸರ್ಕಾರ ಹೇಳಿತ್ತು. ಇಷ್ಟಾದರೂ ಸರ್ಕಾರ ತಡೆಗೋಡೆ ನಿರ್ಮಾಣ ಮಾಡದ ಕಾರಣ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…
ಹೊಸದಿಲ್ಲಿ : ಕಳೆದ ಡಿಸೆಂಬರ್ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…
ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…
ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…