ಮಂಡ್ಯ

ವಿ.ನಾಲೆಗೆ ಕಾರು ಪಲ್ಟಿ : ಚಾಲಕ ಸಾವು

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ.

ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಹಾರಿದೆ. ಲೋಕೇಶ್ ಅವರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮತ್ತು ಲೋಕೇಶ್ ಅವರ ಮೃತದೇಹವನ್ನು ಮೇಲೆತ್ತಲು ಕಾಲುವೆಯ ನೀರನ್ನು ಕಡಿಮೆ ಮಾಡಲು ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ತಡೆಗೋಡೆ ಇಲ್ಲ : ಈ ಘಟನೆ ನಡೆಯಲು ಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕಾರಣವಾಗಿದ್ದು, 2017 ರಲ್ಲೂ ತಡೆಗೋಡೆ ಇಲ್ಲದೇ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ಬಸ್ ದುರಂತ ಸಂಭವಿಸಿ 34 ಮಂದಿ ಮೃತಪಟ್ಟಿದ್ದರು. ಈ ಘಟನೆಯ ಬಳಿಕ ವಿ.ನಾಲೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲೆಲ್ಲ ತಡೆಗೋಡೆ ನಿರ್ಮಿಸುವುದಾಗಿ ಅಂದಿನ ಸರ್ಕಾರ ಹೇಳಿತ್ತು. ಇಷ್ಟಾದರೂ ಸರ್ಕಾರ ತಡೆಗೋಡೆ ನಿರ್ಮಾಣ ಮಾಡದ ಕಾರಣ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

27 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

32 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

36 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

42 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago